ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದುವರಿಯಲಿದೆ ಮಳೆ ಆರ್ಭಟ

masthmagaa.com:

ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಇವತ್ತು ಕೂಡ ಭಾರಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗೋ ಸಾಧ್ಯತೆ ಇದೆ ಅಂತ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ಉತ್ತರಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅತ್ತ ಮಹಾರಾಷ್ಟ್ರದ ಹಲವೆಡೆ ಮಳೆ ಆರ್ಭಟ ಜೋರಾಗಿದ್ದು ಮುಂಬೈನಲ್ಲಿ ರೆಡ್​ ಅಲರ್ಟ್ ಘೋಷಿಸಲಾಗಿದೆ. ಥಾಣೆಯಲ್ಲಿ ನಾಲ್ಕು ಮನೆಗಳು ನೆಲಕ್ಕುರುಳಿವೆ. ದೆಹಲಿ, ಹರಿಯಾಣದಲ್ಲೂ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಉತ್ತರಾಖಂಡ್​ನ ಉತ್ತರಕಾಶಿ ಜಿಲ್ಲೆಯಲ್ಲಿ ಮೇಘಸ್ಫೋಟ ಉಂಟಾಗಿ ಕನಿಷ್ಠ ಮೂವರು ಮೃತಪಟ್ಟಿದ್ದಾರೆ.

-masthmagaa.com

Contact Us for Advertisement

Leave a Reply