ಹುಲಿ ಉಗುರು ಕೇಸ್‌: ನಟ ಜಗ್ಗೇಶ್‌ಗೆ ರಿಲೀಫ್‌ ನೀಡಿದ ಕರ್ನಾಟಕ ಹೈಕೋರ್ಟ್‌

masthmagaa.com:

ಹುಲಿ ಉಗುರು ಧಾರಣೆ ಆರೋಪದ ಹಿನ್ನೆಲೆಯಲ್ಲಿ ನಟ ಹಾಗೂ ಸಂಸದ ಜಗ್ಗೇಶ್ ವಿರುದ್ಧ ಅರಣ್ಯ ಇಲಾಖೆ ಹೊರಡಿಸಿದ್ದ ನೋಟಿಸ್‌ಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಇತ್ತೀಚೆಗೆ, ಅವರಿಗೆ ನೋಟಿಸ್ ಜಾರಿಗೊಳಿಸಿದ್ದ ಕರ್ನಾಟಕ ಅರಣ್ಯ ಇಲಾಖೆ, ಬೆಂಗಳೂರಿನಲ್ಲಿರುವ ಅವರ ನಿವಾಸದ ಮೇಲೆ ರೈಡ್ ಮಾಡಿದ್ದರು. ನೋಟಿಸಿಗೆ ಉತ್ತರ ಕೊಡುವ ಮುನ್ನವೇ ರೈಡ್ ಮಾಡಿದ್ದಕ್ಕಾಗಿ ಜಗ್ಗೇಶ್ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ಅರಣ್ಯ ಇಲಾಖೆ ಜಗ್ಗೇಶ್ ಅವರಿಗೆ ನೀಡಿದ್ದ ನೋಟಿಸ್‌ಗೆ ತಾತ್ಕಾಲಿಕ ತಡೆ ನೀಡಿದೆ.

-masthmagaa.com

Contact Us for Advertisement

Leave a Reply