ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.. ಆರೆಂಜ್ ಅಲರ್ಟ್​

masthmagaa.com:

ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಾದ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಕೊಪ್ಪಳ, ಬೆಳಗಾವಿ, ಬಾಗಲಕೋಟೆ, ಗದಗ, ಧಾರವಾಡ, ವಿಜಯಪುರ ಮತ್ತು ಬಳ್ಳಾರಿಯ ಅಲ್ಲಲ್ಲಿ ಸೆಪ್ಟೆಂಬರ್ 19ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಅಂತ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ. ಅದ್ರಲ್ಲೂ ಉತ್ತರ ಒಳನಾಡಿನ ಕೆಲವೆಡೆ ದಿಢೀರ್ ಪ್ರವಾಹದ ಅಪಾಯ ಕೂಡ ಇದೆ ಅಂತ ಕೇಂದ್ರ ಜಲ ಆಯೋಗದ ಪ್ರವಾಹ ಮುನ್ಸೂಚನಾ ಘಟಕ ತಿಳಿಸಿದೆ.

ಉಳಿದಂತೆ ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಧ್ಯಮ ಪ್ರಮಾಣದಿಂದ ವ್ಯಾಪಕ ಮಳೆಯಾಗಲಿದೆ ಅಂತಾನೂ ಮುನ್ಸೂಚನೆ ನೀಡಿದೆ. ಕೇರಳದಲ್ಲೂ ಸೆಪ್ಟೆಂಬರ್ 19ರಿಂದ 21ರವರೆಗೆ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆ ಎರಡೂ ರಾಜ್ಯಗಳಲ್ಲಿ ಸೆಪ್ಟೆಂಬರ್ 20-21ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

-masthmagaa.com

Contact Us for Advertisement

Leave a Reply