masthmagaa.com:
ಶನಿವಾರ ಹುಬ್ಬಳ್ಳಿಯಲ್ಲಿ ಪ್ರಚಾರ ಮಾಡುವ ಸಂದರ್ಭದಲ್ಲಿ ಕಾಂಗ್ರೆಸ್ನ ನಾಯಕಿ ಸೋನಿಯಾ ಗಾಂಧಿ ಅವ್ರು, ಕರ್ನಾಟಕದ ಪ್ರತಿಷ್ಠೆ, ಸಾರ್ವಭೌಮತೆ ಅಥ್ವಾ ಸಮಗ್ರತೆಗೆ ಧಕ್ಕೆ ತರಲು ಕಾಂಗ್ರೆಸ್ ಯಾರಿಗೂ ಅವಕಾಶ ನೀಡಲ್ಲ ಅಂತ ಹೇಳಿದ್ರು. ಅದನ್ನ ಕಾಂಗ್ರೆಸ್ ತನ್ನ ಟ್ವಿಟರ್ನಲ್ಲೂ ಶೇರ್ ಮಾಡಿತ್ತು. ಇದರ ಬೆನ್ನಲ್ಲೇ ಬಿಜೆಪಿ ಕಾಂಗ್ರೆಸ್ ಹಾಗೂ ಸೋನಿಯಾ ಅವರ ವಿರುದ್ಧ ಮುಗಿಬಿದ್ದಿವೆ. ಒಂದು ದೇಶ ಸ್ವತಂತ್ರವಾದಾಗ ಅದನ್ನ ಸಾರ್ವಭೌಮ ದೇಶ ಅಂತ ಕರೀತಾರೆ. ಸೋ ಕರ್ನಾಟಕ ಭಾರತದಿಂದ ಪ್ರತೇಕವಾಗಿದೆ ಅಂತ ಕಾಂಗ್ರೆಸ್ ಹೇಳಿದೆ ಅಂತ ಆರೋಪಿಸಿದ್ದಾರೆ. ಅಲ್ದೇ ಸೋನಿಯಾ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.
-masthmagaa.com
Contact Us for Advertisement