masthmagaa.com:
ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು, ಕರಾವಳಿಯ ಕೆಲವೊಂದು ಕಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಅರಕೆರೆಯಲ್ಲಿ ಅತಿಹೆಚ್ಚು 130 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳ ಕೆಲವೊಂದು ಕಡೆ ಭಾರಿ ಮಳೆ, ಬಹುತೇಕ ಕಡೆ ಸಾಧರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳ ಬಹುತೇಕ ಕಡೆ ಸಾಧರಣ ಮಳೆ ಮತ್ತು ಉತ್ತರ ಒಳನಾಡು ಜಿಲ್ಲೆಗಳ ಕೆಲವೊಂದುಕಡೆ ಸಾಧರಣ ಮಳೆಯಾಗುವ ಸಾಧ್ಯತೆಯಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಅತ್ತ ನಮ್ಮ ಪಕ್ಕದ ಕೇರಳ ಮತ್ತು ಮಾಹೆ ಹಾಗೂ ತಮಿಳುನಾಡು, ಪುದುಚೆರಿ, ಕಾರೈಕಲ್ನ ಕೆಲವೊಂದುಕಡೆ ಅಕ್ಟೋಬರ್ 25ನೇ ತಾರೀಖಿನವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಅಂತ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
-masthmagaa.com
Contact Us for Advertisement