ರಾಜ್ಯದ ಹಲವೆಡೆ ಇವತ್ತು ಭಾರಿ ಮಳೆ: ಹವಾಮಾನ ವರದಿ ಹೇಗಿದೆ?

masthmagaa.com:

ರಾಜ್ಯದ ಹಲವೆಡೆ ಇವತ್ತು ಭಾರಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ನಿರಂತರವಾಗಿ ಮಳೆಯಾಗ್ತಿದೆ. ಕಳೆದ 24 ಗಂಟೆಯಲ್ಲಿ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮುಗಳಿಹಾಳ ಎಂಬಲ್ಲಿ ಅತಿಹೆಚ್ಚು 139 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡು, ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳ ಕೆಲವೊಂದು ಕಡೆ ಭಾರಿ ಮಳೆ, ಬಹುತೇಕ ಕಡೆ ಸಾಧಾರಣ ಮಳೆಯಾಗೋ ಸಾಧ್ಯತೆ ಇದೆ. ಮಲೆನಾಡು ಜಿಲ್ಲೆಗಳ ಬಹುತೇಕ ಕಡೆ ಸಾಧಾರಣ ಮಳೆಯಾಗೋ ಸಾಧ್ಯತೆ ಇದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ ಅಂತಾನೂ ಹೇಳಿದೆ.
ಇನ್ನು ನವೆಂಬರ್​ 19ನೇ ತಾರೀಖು ಬೆಳಗ್ಗೆ 8.30ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ ರಾಮನಗರ, ಮಂಡ್ಯ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್ ಘೋಷಿಸಲಾಗಿದೆ. ಆರೆಂಜ್ ಅಲರ್ಟ್ ಅಂದ್ರೆ ಈ ಜಿಲ್ಲೆಗಳಲ್ಲಿ 115.6 ಮಿಲಿ ಮೀಟರ್​ನಿಂದ 204.4 ಮಿಲಿಮೀಟರ್ ಮಳೆಯಾಗೋ ಸಾಧ್ಯತೆ ಇದೆ ಅಂತ. ಇನ್ನುಳಿದಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ನವೆಂಬರ್​ 19ರ ಬೆಳಗ್ಗೆ 8.30ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಂದ್ರೆ ಆರೆಂಜ್​ ಅಲರ್ಟ್​ಗಿಂತ ಕಮ್ಮಿ ಮಳೆಯಾಗೋ ಸಾಧ್ಯತೆ ಇದೆ ಅಂತ ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಇನ್ನು ನವೆಂಬರ್ 19ರ ಬೆಳಗ್ಗೆ 8.30ರ ನಂತ್ರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ ರಾಮನಗರ, ಮಂಡ್ಯ, ಚಾಮರಾಜನಗರ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

-masthmagaa.com

Contact Us for Advertisement

Leave a Reply