masthmagaa.com:
ನಿನ್ನೆ ತೆಲಂಗಾಣದಲ್ಲಿ ಕೇಂದ್ರೀಕೃತವಾಗಿದ್ದ ವಾಯುಭಾರ ಕುಸಿತ ಇವತ್ತು ಉತ್ತರ ಕರ್ನಾಟಕ ದಾಟಿ ಮಹಾರಾಷ್ಟ್ರದತ್ತ ಅಂದ್ರೆ ಪಶ್ಚಿಮದತ್ತ ಸಾಗಿದೆ ಅಂತ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಉತ್ತರ ಕರ್ನಾಟಕದ ಕಲಬುರಗಿ, ರಾಯಚೂರು ಸೇರಿದಂತೆ ಹಲವೆಡೆ ಭಾರಿ ಮಳೆಯಾಗಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ.
ಈ ವಾಯುಭಾರ ಕುಸಿತವು ಅಕ್ಟೋಬರ್ 16ರಂದು ಮಹಾರಾಷ್ಟ್ರ ಕರಾವಳಿಯಲ್ಲಿ ದುರ್ಬಲಗೊಳ್ಳುವ ಸಾಧ್ಯತೆ ಇದೆ. ಇದರ ನಡುವೆ ಅಕ್ಟೋಬರ್ 15ರಂದು ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಗೋವಾ, ಮಧ್ಯ ಮಹಾರಾಷ್ಟ್ರ, ದಕ್ಷಿಣ ಗುಜರಾತ್ನಲ್ಲಿ ಭಾರಿ ಮಳೆಯಾಗಲಿದೆ ಅಂತ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
-masthmagaa.com
Contact Us for Advertisement