masthmagaa.com:
ಪಿಎಸ್ಐ ನೇಮಕಾತಿ ಅಕ್ರಮದ ತನಿಖೆ ಚುರುಕುಗೊಂಡಿದ್ದು ಸಿಐಡಿ ಪೋಲಿಸರು ಇವತ್ತು ಸ್ಥಳ ಮಹಜರು ಮಾಡಿದ್ದಾರೆ. ಕಲಬುರಗಿಯ ಜ್ಞಾನಜ್ಯೋತಿ ಇಂಗ್ಲೀಷ್ ಮಾಧ್ಯಮ ಶಾಲೆಗೆ ಆರೋಪಿಗಳಾದ ದಿವ್ಯಾ ಹಾಗರಗಿ, ಅಲ್ಲಿನ ಪೋಲಿಸರು ಮತ್ತು ಇತರರನ್ನ ಕರೆದಕೊಂಡು ಹೋಗಿ ಸ್ಥಳ ಪರಿಶೀಲನೆ ಮಾಡಿದ್ದಾರೆ. ಬೆಂಗಳೂರಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಕೂಡ ಸ್ಥಳ ಮಹಜರು ನಡೆಸಲಾಗಿದೆ. ಮಲ್ಲೇಶ್ವರ, ಯಲಹಂಕ, ಜಯನಗರ ಸೇರಿದಂತೆ 20ಕ್ಕೂ ಹೆಚ್ಚು ಸ್ಥಳಗಳನ್ನ ಪೋಲಿಸರು ಪಟ್ಟಿ ಮಾಡ್ಕೊಂಡಿದ್ದಾರೆ.
-masthmagaa.com
Contact Us for Advertisement