ರೈತರ ಸಾಧನೆ.. ರಾಜ್ಯಕ್ಕೆ ಕೇಂದ್ರದಿಂದ ಅವಾರ್ಡ್

ಕಳೆದ 5 ವರ್ಷದ ಅವಧಿಯಲ್ಲಿ ದೇಶದಲ್ಲಿಯೇ ಅತಿ ಹೆಚ್ಚು ದ್ವಿದಳ ಧಾನ್ಯ ಬೆಳದ ರಾಜ್ಯ ಎಂಬ ಖ್ಯಾತಿಗೆ ಕರ್ನಾಟಕ ಪಾತ್ರವಾಗಿದೆ. ಹೀಗಾಗಿಯೇ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಬಹುಮಾನ ಲಭಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ, ಭಾರತ ಸರ್ಕಾರವು ಈ ವರ್ಷದ ದ್ವಿದಳ ಧಾನ್ಯಗಳ ವರ್ಗದಡಿಯಲ್ಲಿ ಪ್ರಶಂಸಾ ಪ್ರಶಸ್ತಿಗೆ ಕರ್ನಾಟಕ ರಾಜ್ಯವನ್ನು ಆಯ್ಕೆ ಮಾಡಿದೆ. ಕಳೆದ 5 ವರ್ಷಗಳಿಗಿಂತ ಹೆಚ್ಚಿನ ಉತ್ಪಾದನೆ ಸಾಧಿಸಿದ್ದಕ್ಕಾಗಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಪ್ರಶಂಸಾ ಪತ್ರ ಹಾಗೂ ಒಂದು ಕೋಟಿ ರೂಪಾಯಿಯ ನಗದು ಬಹುಮಾನವನ್ನು ಪ್ರಶಸ್ತಿಯು ಈ ಒಳಗೊಂಡಿದೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸಿಎಂ ಯಡಿಯೂರಪ್ಪಗೆ ಮಾಹಿತಿ ನೀಡಿದ್ದು, ಸಿಎಂ ಸೇರಿದಂತೆ ಕೃಷಿ ಇಲಾಖೆ ಅಧಿಕಾರಿಗಳನ್ನು ಅಭಿನಂದಿಸಿದ್ದಾರೆ. ಸಿಎಂ ಯಡಿಯೂರಪ್ಪ ಕೂಡ, ರೈತರು ಮತ್ತು ಅಧಿಕಾರಿಗಳನ್ನು ಹಾಡಿಹೊಗಳಿದ್ದಾರೆ.

Contact Us for Advertisement

Leave a Reply