masthmagaa.com:
ಜನವರಿ 26ರಂದು ದಿಲ್ಲಿಯ ಕರ್ತವ್ಯ ಪಥದಲ್ಲಿ ನಡೆಯಲಿರೊ ಗಣರಾಜ್ಯೋತ್ಸವ ದಿನಾಚರಣೆಯ ಪರೇಡ್ನಲ್ಲಿ ರಾಜ್ಯದ ಸ್ತಬ್ದಚಿತ್ರಕ್ಕೆ ಕೊನೆಗೂ ಅವಕಾಶ ಸಿಕ್ಕಿದೆ. ಈ ಮೂಲಕ ಕರ್ನಾಟಕದ ಸ್ತಬ್ದಚಿತ್ರ 14ನೇ ಬಾರಿಗೆ ಕರ್ತವ್ಯ ಪಥದಲ್ಲಿ ಸಾಗಲಿದೆ. ಸ್ತಬ್ದಚಿತ್ರಕ್ಕೆ ಅನುಮತಿ ಸಿಕ್ಕಿಲ್ಲ ಅಂತ ಸುದ್ದಿ ಬರ್ತಿದ್ದ ಕೂಡಲೇ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈಗ ಕೇಂದ್ರ ಸರ್ಕಾರ ರಾಜ್ಯದ ಕೂಗಿಗೆ ಮಣೆ ಹಾಕಿದ್ದು, ಕೊನೆ ಕ್ಷಣದಲ್ಲಿ ಗ್ರೀನ್ ಸಿಗ್ನಲ್ ದೊರೆತಿದೆ.
-masthmagaa.com
Contact Us for Advertisement