masthmagaa.com:
ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವ್ರು ಇವತ್ತು ದಿಲ್ಲಿಯಲ್ಲಿ ಸಭೆ ನಡೆಸಿದ್ರು. ಇದು ಅವ್ರ ಪಕ್ಷಗಳು ಗೋವಾದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಎದುರಾಳಿಗಳಾಗಿ ಸ್ಪರ್ಧಿಸಿದ ನಂತ್ರ ಮೊದಲನೇ ಭೇಟಿಯಾಗಿದೆ. ಜೊತೆಗೆ ಈ ಭೇಟಿಯಲ್ಲಿ ವಿರೋಧ ಪಕ್ಷದ ಏಕತೆ ತರೋ ವಿಚಾರ ಪ್ರಮುಖ ಅಂಶಗಳಲ್ಲಿ ಒಂದಾಗಿತ್ತು ಅಂತ ಮೂಲಗಳು ತಿಳಿಸಿವೆ. ವಿಶೇಷವಾಗಿ 2024ರ ಲೋಕಸಭೆ ಚುನಾವಣೆ ಮತ್ತು ಮುಂಬರೋ ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳು ಒಗ್ಗಟ್ಟಾಗೋ ಬಗ್ಗೆ ಮಾತಾಡಿದ್ದಾರೆ ಅಂತ ತಿಳಿಸಿವೆ.
-masthmagaa.com
Contact Us for Advertisement