masthmagaa.com:
ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಮುಂದಿನ ತಿಂಗಳಿಂದ ಹತ್ತು ಕೆಜಿ ಅಕ್ಕಿಯನ್ನು ನೀಡಲಾಗುವುದು ಅಂತ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಟೆಂಡರ್ ಪ್ರಕ್ರಿಯೆ ನಡೆದಿದ್ದು, ಬರ ಪೀಡಿತ ತಾಲೂಕುಗಳಲ್ಲಿ ಹಣದ ಬದಲು ಅಕ್ಕಿಯನ್ನೇ ಕೊಡುತ್ತೇವೆ ಅಂತ ಹೇಳಿದ್ದಾರೆ. ಅಂದ್ಹಾಗೆ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಕಾಂಗ್ರೆಸ್ 10 ಕೆಜೆ ಅಕ್ಕಿ ಕೊಡುವುದಾಗಿ ಘೋಷಣೆ ಮಾಡಿತ್ತು. ಆದ್ರೆ ಅಕ್ಕಿ ಕೊರತೆ ಎದುರಾದ ಹಿನ್ನೆಲೆಯಲ್ಲಿ 5 ಕೆಜಿ ಅಕ್ಕಿಯ ಬದಲಾಗಿ ಪ್ರತಿಯೊಬ್ಬರಿಗೆ ಪ್ರತಿತಿಂಗಳು 170 ರೂಪಾಯಿ ಹಣವನ್ನು ಹಾಕಲು ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿತ್ತು. ಅದರಂತೆ ಅಕೌಂಟಿಗೆ 170 ರೂಪಾಯಿ ಹಣ ಹಾಕಲಾಗಿತ್ತು. ಇದೀಗ ಹಣದ ಬದಲು ಅಕ್ಕಿಯನ್ನೇ ಕೊಡುವುದಾಗಿ ಸರ್ಕಾರ ಹೇಳಿದೆ.
-masthmagaa.com
Contact Us for Advertisement