masthmagaa.com:
ಪ್ರಧಾನಿ ಮೋದಿ ವಿಷ್ಣುವಿನ 11ನೇ ಅವತಾರವಾಗೋಕೆ ಟ್ರೈ ಮಾಡ್ತಿದ್ದಾರೆ ಅಂತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕೆ ಮಾಡಿದ್ದಾರೆ. ಉತ್ತರಾಖಂಡದ ಡೆಹ್ರಾಡೂನ್ ಸ್ಕೂಲ್ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡೋವಾಗ ಅವ್ರು ಈ ರೀತಿ ಹೇಳಿಕೆ ನೀಡಿದ್ದಾರೆ. ಜೊತೆಗೆ ʻದೇಶದಿಂದ ಬಿಜೆಪಿಯನ್ನ ಕಿತ್ತೊಗೆಯಬೇಕು. ಧರ್ಮದ ಹೆಸರಲ್ಲಿ ಬಿಜೆಪಿಗೆ ಲೋಕಸಭೆ ಎಲೆಕ್ಷನ್ ಗೆಲ್ಲೋಕೆ ಬಿಡ್ಬೇಡಿ. ಕಾಂಗ್ರೆಸ್ ನಾಯಕರು ದೇಶಕ್ಕಾಗಿ ಪ್ರಾಣ ಕೊಟ್ಟಿದ್ದಾರೆ ಅಂತ ಹೇಳಿದ್ದಾರೆ.
-masthmagaa.com
Contact Us for Advertisement