ಹಿಂದೂ ಸಮಾಜ ಪಕ್ಷದ ಜವಾಬ್ದಾರಿ ವಹಿಸಿಕೊಂಡ ಕಮಲೇಶ್ ತಿವಾರಿ ಪತ್ನಿ

ಉತ್ತರ ಪ್ರದೇಶ: ಕಮಲೇಶ್ ತಿವಾರಿ ಪತ್ನಿ ಕಿರಣ್ ತಿವಾರಿ ಹಿಂದೂ ಸಮಾಜ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅಕ್ಟೋಬರ್ 18ರಂದು ಹಿಂದೂ ಸಮಾಜ ಪಕ್ಷದ ಅಧ್ಯಕ್ಷ ಕಮಲೇಶ್ ತಿವಾರಿಯವರನ್ನು ದುಷ್ಕರ್ಮಿಗಳು ಗುಂಡಿಟ್ಟು, ಚಾಕುವಿನಿಂದ ಇರಿದು ಹತ್ಯೆಗೈದಿದ್ದರು. ಹೀಗಾಗಿ ತಮ್ಮ ಪತಿಯ ಜವಾಬ್ದಾರಿಯನ್ನು ಕಿರಣ್ ತಿವಾರಿ ವಹಿಸಿಕೊಂಡಿದ್ದಾರೆ.

ಕಮಲೇಶ್ ತಿವಾರಿ ಲಕ್ನೋದಲ್ಲಿದ್ದಾಗ ಅವರ ಭೇಟಿಗೆ ಬಂದ ಅಶ್ಫಾಕ್ ಮತ್ತು ಮೊಯಿನುದ್ದೀನ್ ಹತ್ಯೆಗೈದು ಪರಾರಿಯಾಗಿದ್ದರು. ಸದ್ಯ ಆರೋಪಿಗಳನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಇದಾದ ಬಳಿಕ ಕಿರಣ್ ತಿವಾರಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭೇಟಿಯಾಗಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಮನವಿ ಮಾಡಿದ್ದರು.

Contact Us for Advertisement

Leave a Reply