masthmagaa.com:
ಮುಂಬರುವ ಲೋಕಸಭೆ ಹಾಗೂ ಬಿಬಿಎಂಪಿ ಚುನಾವಣೆಗೆ ರಾಜ್ಯ ಕಾಂಗ್ರೆಸ್ ತಯಾರಿ ನಡೆಸುತ್ತಿದೆ. ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ಆಪರೇಷನ್ ಹಸ್ತದ ಕುರಿತು ಹಲವು ಸುದ್ಧಿಗಳು ಹರಿದಾಡುತ್ತಿವೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಆಪರೇಷನ್ ಬಿಬಿಎಂಪಿ ಶುರು ಮಾಡಿಕೊಂಡಿರೋ ರೀತಿ ಕಾಣುತ್ತಿದೆ. ಯಾಕಂದ್ರೆ ಇಂದು ಹಲವು ಮಾಜಿ ಕಾರ್ಪೊರೇಟರ್ಗಳು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. KR ಪುರ ಕ್ಷೇತ್ರದ ಮಾಜಿ ಕಾರ್ಪೊರೇಟರ್ಗಳಾದ ವೀರಣ್ಣ, ಶ್ರೀನಿವಾಸ ಅವರು ಇಂದು ಕುಮಾರಕೃಪಾ ಗೆಸ್ಟ್ಹೌಸ್ನಲ್ಲಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ಗೆ ಸೇರಿದ್ದಾರೆ. ಅಂದ್ಹಾಗೆ ಆರ್.ಆರ್ ನಗರ ಕ್ಷೇತ್ರದ ಮಾಜಿ ಬಿಜೆಪಿ ಕಾರ್ಪೊರೇಟರ್ಗಳು ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಇದೀಗ ಕೆ.ಆರ್ ಪುರ ಕ್ಷೇತ್ರದ ಮಾಜಿ ಕಾರ್ಪೋರೇಟ್ಗಳು ಕಾಂಗ್ರೆಸ್ ಸೇರಿಕೊಂಡಿದ್ದಾರೆ. ಇತ್ತ ವಿಪಕ್ಷಗಳ ಸುಮಾರು 20 ಶಾಸಕರು ಕಾಂಗ್ರೆಸ್ ಹೈಕಮಾಂಡ್ ಸಂಪರ್ಕದಲ್ಲಿದ್ದಾರೆ ಅಂತ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
-masthmagaa.com
Contact Us for Advertisement