masthmagaa.com:
ಉತ್ತರ ಪ್ರದೇಶದ ಮಥುರಾ ಕೃಷ್ಣ ಜನ್ಮಭೂಮಿ ವಿಚಾರ ಕೂಡ ಮತ್ತೆ ಮುನ್ನಲೆಗೆ ಬಂದಿದೆ. ಈ ವಿಚಾರವಾಗಿ ಮಥುರಾದ ಶಾಹಿ ಈದ್ಗಾ ಮಸೀದಿಯ ಸಮೀಕ್ಷೆ ನಡೆಸೋಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಹಿಂದೆ ಕೋರ್ಟ್ ನೇಮಿಸಿರೋ ಕಮಿಷನರ್ ಮೂಲಕ ಈದ್ಗಾ ಮಸೀದಿಯ ಸಮೀಕ್ಷೆ ನಡೆಸೋಕೆ ಅಲಹಾಬಾದ್ ಹೈಕೋರ್ಟ್ ಆದೇಶ ನೀಡಿತ್ತು. ನಂತ್ರ ಕೆಲವು ಮುಸ್ಲಿಂ ಸಂಘಟನೆಗಳು ಈ ಆದೇಶವನ್ನ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿಯನ್ನ ಸಲ್ಲಿಸಿದ್ವು. ಇದೀಗ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಹೈಕೋರ್ಟ್ ನೀಡಿದ್ದ ಆದೇಶವನ್ನ ರಿಜೆಕ್ಟ್ ಮಾಡಿದೆ. ಅಲ್ಲದೆ ಎಲ್ಲಾ ಸಮಸ್ಯೆಗಳನ್ನೂ ಕೋರ್ಟಿನ ನಿರ್ಧಾರಕ್ಕೆ ಬಿಡೋಕಾಗಲ್ಲ. ಅರ್ಜಿಯಲ್ಲಿ ಸ್ಪಷ್ಟತೆ ಇಲ್ಲ ಅಂತ ಕೋರ್ಟ್ ಹೇಳಿದೆ.
-masthmagaa.com
Contact Us for Advertisement