masthmagaa.com:
ಯುರೋಪ್ ಪ್ರವಾಸ ಮುಗಿಸಿ ಬಂದಿರುವ ಮಾಜಿ ಸಿಎಂ ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತೆ ಭ್ರಷ್ಟಾಚಾರದ ಬಾಂಬ್ ಸಿಡಿಸಿದ್ದಾರೆ. ಮಂತ್ರಿಗಳ ಬಳಿ ಗುತ್ತಿಗೆದಾರರ ಸಂಘದವರು ಹೋದರೆ ಇಲಾಖೆಯ ಮಂತ್ರಿಗಳು 2-3 ಏಜೆಂಟ್ಗಳನ್ನ ಇಟ್ಟುಕೊಂಡಿದ್ದಾರೆ. ಹಣ ತಂದಿದ್ದರೆ ಒಳಗೆ ಬನ್ನಿ, ಇಲ್ಲದಿದ್ದರೆ ಹೊರಗೆ ಇರಿ ಅಂತ ಇಲಾಖೆಯಲ್ಲಿ ಮಂತ್ರಿಗಳ ಚೇಲಾಗಳು ಹೇಳುತ್ತಾರಂತೆ. ಇದು ರಾಜ್ಯದ ನೂತನ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ದಂಧೆಗಳು ಅಂತ ಹೇಳಿದ್ದಾರೆ. ಸರ್ಕಾರ ಪತನಕ್ಕೆ ಸಿಂಗಾಪುರದಲ್ಲಿ ಷಡ್ಯಂತ ನಡೆಯುತ್ತಿದೆ ಅಂತ ಡಿ ಕೆ ಶಿವಕುಮಾರ್ ಪರೋಕ್ಷವಾಗಿ ಕುಮಾರಸ್ವಾಮಿ ಮೇಲೆ ಆರೋಪ ಮಾಡಿದ್ರು. ಇದಕ್ಕೆ ತಿರುಗೇಟು ಕೊಟ್ಟಿರುವ ಕುಮಾರಸ್ವಾಮಿ, ನಾವು ಯುರೋಪ್ಗೆ ಕುಟುಂಬ ಸಮೇತ ಹೋಗಿದ್ವಿ. ಸರ್ಕಾರ ಕೆಡವಲು ಹೋಗಿದ್ದೇವೆ ಅನ್ನೋ ರೀತಿ ಹೇಳಿದ್ದಾರೆ. ನಾವು 19 ಸ್ಥಾನ ಗೆದ್ದಿದ್ರೂ ಕಾಂಗ್ರೆಸ್ಗೆ ನಮ್ಮ ಮೇಲೆ ಭಯವಿದೆ ಅಂತ ಟಾಂಗ್ ನೀಡಿದ್ದಾರೆ.
-masthmagaa.com
Contact Us for Advertisement