ಉಪಚುನಾವಣೆ ಬಗ್ಗೆ ಕುಮಾರಸ್ವಾಮಿ ಹೇಳಿದ್ದೇನು..?

ಕಾಂಗ್ರೆಸ್‍ಗೆ ಬಿಜೆಪಿಗಿಂತ ಜೆಡಿಎಸ್ಸೇ ದೊಡ್ಡ ಶತ್ರು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಮೈಸೂರಲ್ಲಿ ಮಾತನಾಡಿದ ಅವರು, ಕೇಂದ್ರ ಚುನಾವಣಾ ಆಯೋಗ 15 ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಿಸಿದೆ. ಈ 15 ಕ್ಷೇತ್ರಗಳ ಫಲಿತಾಂಶದ ಮೇಲೆಯೇ ರಾಜ್ಯದ ಮುಂದಿನ ರಾಜಕೀಯ ನಿರ್ಧಾರವಾಗಲಿದೆ ಎಂದು ನಾನು ಭಾವಿಸಿದ್ದೇನೆ. ಈ ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ. ಇದು ವೈಯಕ್ತಿಕ ನಿರ್ಧಾರವಲ್ಲ. ಪಕ್ಷದ ನಿರ್ಧಾರ, ಕಾರ್ಯಕರ್ತರ ನಿರ್ಧಾರ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಅಲ್ಲದೆ ಹೂಣಸೂರಿನಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಗೆಲ್ಲಲೇಬೇಕು ಅಂತ ಕಾರ್ಯಕರ್ತರಿಗೆ ಕರೆಕೊಟ್ಟಿದ್ದಾರೆ.

Contact Us for Advertisement

Leave a Reply