ಕಾಂಗ್ರೆಸ್ಗೆ ಬಿಜೆಪಿಗಿಂತ ಜೆಡಿಎಸ್ಸೇ ದೊಡ್ಡ ಶತ್ರು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಮೈಸೂರಲ್ಲಿ ಮಾತನಾಡಿದ ಅವರು, ಕೇಂದ್ರ ಚುನಾವಣಾ ಆಯೋಗ 15 ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಿಸಿದೆ. ಈ 15 ಕ್ಷೇತ್ರಗಳ ಫಲಿತಾಂಶದ ಮೇಲೆಯೇ ರಾಜ್ಯದ ಮುಂದಿನ ರಾಜಕೀಯ ನಿರ್ಧಾರವಾಗಲಿದೆ ಎಂದು ನಾನು ಭಾವಿಸಿದ್ದೇನೆ. ಈ ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ. ಇದು ವೈಯಕ್ತಿಕ ನಿರ್ಧಾರವಲ್ಲ. ಪಕ್ಷದ ನಿರ್ಧಾರ, ಕಾರ್ಯಕರ್ತರ ನಿರ್ಧಾರ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಅಲ್ಲದೆ ಹೂಣಸೂರಿನಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಗೆಲ್ಲಲೇಬೇಕು ಅಂತ ಕಾರ್ಯಕರ್ತರಿಗೆ ಕರೆಕೊಟ್ಟಿದ್ದಾರೆ.
Contact Us for Advertisement2019-09-21