ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು: ವಿವಾದಿತ ಹೇಳಿಕೆ ನೀಡಿದ ಸಚಿವೆ

masthmagaa.com:

‌ಬೆಳಗಾವಿ ಕರ್ನಾಟಕದ 2ನೇ ರಾಜಧಾನಿಯಂತ ಘೋಷಣೆ ಮಾಡಿದ್ರು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತ್ರ ಮರಾಠಿಗರ ಓಲೈಕೆಗೆ ಮುಂದಾಗಿದ್ದಾರೆ. ಬೆಳಗಾವಿ ಸ್ವಾತಂತ್ರ್ಯ ಪೂರ್ವದಲ್ಲಿ ಮಹಾರಾಷ್ಟ್ರಕ್ಕೆ ಸೇರಿತ್ತು ಅಂತೇಳಿ ವಿವಾದ ಸೃಷ್ಟಿಸಿದ್ದಾರೆ. ಅದ್ರಲ್ಲೂ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡುವಾಗ ಈ ಹೇಳಿಕೆ ನೀಡಿದ್ದಾರೆ. “ಕನ್ನಡ ಭಾಷೆಗೆ ಬಹಳ ವರ್ಷಗಳ ಇತಿಹಾಸವಿದೆ. 8 ಜ್ಞಾನಪೀಠ ಪ್ರಶಸ್ತಿಗಳು ಲಭಿಸಿವೆ. ಇಂತಹ ನಾಡಲ್ಲಿ ಜನಿಸಲು ಪುಣ್ಯ ಮಾಡಿರಬೇಕು. ಆದ್ರೆ, ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು” ಅಂದಿದ್ದಾರೆ. ಈ ಬಗ್ಗೆ ರಿಯಾಕ್ಟ್‌ ಮಾಡಿರೋ ಬಿಜೆಪಿ ಶಾಸಕ SR ವಿಶ್ವನಾಥ್‌, ʻಹೆಬ್ಬಾಳ್ಕರ್ ಆರೂವರೆ ಕೋಟಿ ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಲಕ್ಷ್ಮಿ ಹೆಬ್ಬಾಳ್ಕರ್‌ರನ್ನ ಸಚಿವ ಸಂಪುಟದಿಂದ ಹೊರಗಿಡ್ಬೇಕುʼ ಅಂತ ಆಗ್ರಹಿಸಿದ್ದಾರೆ.

-masthmagaa.com

Contact Us for Advertisement

Leave a Reply