masthmagaa.com:
ದೇಶದಲ್ಲಿ ಮುಸ್ಲಿಂ ಮೀಸಲಾತಿ ಬಗ್ಗೆ ವಿಪಕ್ಷ ಮತ್ತು ಬಿಜೆಪಿ ನಡುವೆ ಪರ ವಿರೋಧ ಚರ್ಚೆ ಎದ್ದಿರುವಾಗಲೇ INDIA ಮೈತ್ರಿಕೂಟದ ಪ್ರಮುಖ ನಾಯಕ ಲಾಲೂ ಪ್ರಸಾದ್ ಯಾದವ್ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ದೇಶದಲ್ಲಿ ಮುಸ್ಲಿಮರಿಗೆ ಪೂರ್ತಿ ಮೀಸಲಾತಿ ಸಿಗಬೇಕು ಅಂತೇಳಿದ್ದಾರೆ. ಇನ್ನು ಇದಕ್ಕೆ ರಿಯಾಕ್ಟ್ ಮಾಡಿರೋ ಮೋದಿ , ‘ಮುಸ್ಲಿಮರಿಗೆ ಸಂಪೂರ್ಣ ಮೀಸಲಾತಿ ಸಿಗಬೇಕು ಅಂತ ಲಾಲು ಪ್ರಸಾದ್ ಹೇಳುತ್ತಿದ್ದಾರೆ. ಅಂದ್ರೆ ಒಬಿಸಿ, ಎಸ್ ಸಿ, ಎಸ್ ಟಿ ಸಮುದಾಯಗಳಿಗೆ ಮೀಸಲಾತಿಯನ್ನು ಕಿತ್ತುಕೊಂಡು ಮುಸ್ಲಿಮರಿಗೆ ಕೊಡೋಕೆ ಮುಂದಾಗಿದ್ದಾರೆ. ಇದೆಲ್ಲಾ ವೋಟ್ ಬ್ಯಾಂಕ್ಗಾಗಿ ತಾನೇ ಅಂತ ಕಿಡಿಕಾರಿದ್ದಾರೆ.
-masthmagaa.com
Contact Us for Advertisement