masthmagaa.com:
ಮೂಡಿಗೆರೆ ತಾಲೂಕಿನ ಊರುಬಗೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ಅರ್ಜುನ್ ಎಂಬ ಕೂಲಿ ಕಾರ್ಮಿಕ ಒಬ್ರು ಸಾವನ್ನಪ್ಪಿದ್ದಾರೆ. ಕಾಡಾನೆಗಳನ್ನು ಹಿಡಿಯುವಂತೆ ಆಗ್ರಹಿಸಿ ಅರಣ್ಯ ಇಲಾಖೆಎದುರು ಕಾರ್ಮಿಕನ ಮೃತದೇಹವಿಟ್ಟು ಅಲ್ಲಿನ ಜನ್ರು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಅರಣ್ಯ ಇಲಾಖೆಗೆ ಮುತ್ತಿಗೆ ಹಾಕಲು ಯತ್ನಿಸಿ, ಪೊಲೀಸ್ ಜೀಪ್ ತಳ್ಳಾಡಿದ್ದಾರೆ. ಆಗ ಪೊಲೀಸರು ಲಾಠಿಚಾರ್ಜ್ ಮಾಡಿ ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ. ಪೊಲೀಸರು ಪ್ರತಿಭಟನಾಕಾರರನ್ನು ಮನಸೋಇಚ್ಛೆ ಥಳಿಸಿದ್ದಾರೆ. ಪೊಲೀಸರಿಂದ ಲಾಠಿ ಚಾರ್ಜ್ ವಿರೋಧಿಸಿ ಜನರು ಮತ್ತೆ ಪ್ರತಿಭಟನೆ ಮಾಡಿದ್ದಾರೆ. ಕೊನೆಗೆ ಪ್ರತಿಭಟನಾಕಾರರ ಒತ್ತಾಯಕ್ಕೆ ಮಣಿದು ಅರಣ್ಯ ಇಲಾಖೆ ಕಾಡಾನೆ ಸೆರೆ ಹಿಡಿಯುವಂತೆ ಆದೇಶ ನೀಡಿದೆ.
-masthmagaa.com
Contact Us for Advertisement