ಕಾಡಾನೆಗೆ ಕೂಲಿ ಕಾರ್ಮಿಕ ಬಲಿ, ಅರಣ್ಯ ಇಲಾಖೆ ಮುಂದೆ ಶವವಿಟ್ಟು ಪ್ರತಿಭಟನೆ, ಲಾಠಿಚಾರ್ಜ್‌!

masthmagaa.com:

ಮೂಡಿಗೆರೆ ತಾಲೂಕಿನ ಊರುಬಗೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ಅರ್ಜುನ್ ಎಂಬ ಕೂಲಿ ಕಾರ್ಮಿಕ ಒಬ್ರು ಸಾವನ್ನಪ್ಪಿದ್ದಾರೆ. ಕಾಡಾನೆಗಳನ್ನು ಹಿಡಿಯುವಂತೆ ಆಗ್ರಹಿಸಿ ಅರಣ್ಯ ಇಲಾಖೆಎದುರು ಕಾರ್ಮಿಕನ ಮೃತದೇಹವಿಟ್ಟು ಅಲ್ಲಿನ ಜನ್ರು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಅರಣ್ಯ ಇಲಾಖೆಗೆ ಮುತ್ತಿಗೆ ಹಾಕಲು ಯತ್ನಿಸಿ, ಪೊಲೀಸ್​ ಜೀಪ್​​​ ತಳ್ಳಾಡಿದ್ದಾರೆ. ಆಗ ಪೊಲೀಸರು ಲಾಠಿಚಾರ್ಜ್​ ಮಾಡಿ ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ. ಪೊಲೀಸರು ಪ್ರತಿಭಟನಾಕಾರರನ್ನು ಮನಸೋಇಚ್ಛೆ ಥಳಿಸಿದ್ದಾರೆ. ಪೊಲೀಸರಿಂದ ಲಾಠಿ ಚಾರ್ಜ್ ವಿರೋಧಿಸಿ ಜನರು ಮತ್ತೆ ಪ್ರತಿಭಟನೆ ಮಾಡಿದ್ದಾರೆ. ಕೊನೆಗೆ ಪ್ರತಿಭಟನಾಕಾರರ ಒತ್ತಾಯಕ್ಕೆ ಮಣಿದು ಅರಣ್ಯ ಇಲಾಖೆ ಕಾಡಾನೆ ಸೆರೆ ಹಿಡಿಯುವಂತೆ ಆದೇಶ ನೀಡಿದೆ.

-masthmagaa.com

Contact Us for Advertisement

Leave a Reply