12 ವರ್ಷ ಮೇಲ್ಪಟ್ಟ ಹಸುಗಳನ್ನ ಹತ್ಯೆ ಮಾಡಲು ಕಾನೂನಿನಲ್ಲಿ ಅವಕಾಶವಿದೆ: ಸಿದ್ದರಾಮಯ್ಯ

masthmagaa.com:

ಕರ್ನಾಟಕ ಸರ್ಕಾರ ಗೋಹತ್ಯೆ ಕಾನೂನು ಹಿಂಪಡೆಯುವ ಕುರಿತು ಬಿಜೆಪಿ ಹಾಗೂ ನಾಯಕರ ನಡುವೆ ವಾಕ್ಸಮರಗಳು ನಡೀತಾಯಿವೆ. ಇದರ ಮಧ್ಯೆಯೇ ಸಿಎಂ ಸಿದ್ದರಾಮಯ್ಯ ಅವರು ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಅಂತ ಹೇಳಿದ್ದಾರೆ. ಇದೇ ವೇಳೆ ಎಮ್ಮೆಗಳನ್ನು ಕಡಿಯುವುದಾದರೆ ಹಸುಗಳನ್ನು ಯಾಕೆ ಹತ್ಯೆ ಮಾಡಬಾರ್ದು ಅಂತ ಪ್ರಶ್ನಿಸಿರುವ ಪಶುಸಂಗೋಪನಾ ಸಚಿವ ಕೆ ವೆಂಕಟೇಶ್ ಹೇಳಿಕೆ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, 1964ರ ಕಾಯ್ದೆ ಪ್ರಕಾರ 12 ವರ್ಷ ಮೇಲ್ಪಟ್ಟ ಮತ್ತು ಕೃಷಿ ಚಟುವಟಿಕೆಗಳಲ್ಲಿ ಬಳಸಲು ಸಾಧ್ಯವಾಗದ ಹಸುಗಳ ಹತ್ಯೆ ಮಾಡಲು ಅವಕಾಶವಿದೆ ಎಂದಿದ್ದಾರೆ.

-masthmagaa.com

Contact Us for Advertisement

Leave a Reply