ಕಾಂಗ್ರೆಸ್‌ಗೆ ಹಾರಿದ ಲಕ್ಷ್ಮಣ್‌ ಸವದಿ! ಬೇಜಾರಾಯ್ತು ಎಂದ ಸಿಎಂ ಬೊಮ್ಮಾಯಿ!

masthmagaa.com:

ರಾಜ್ಯ ವಿಧಾನಸಭಾ ಚುನಾವಣೆಗೆ ಅಥಣಿ ಟಿಕೆಟ್‌ ಸಿಗದ ಹಿನ್ನೆಲೆ ಲಕ್ಷ್ಮಣ್‌ ಸವದಿ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದಾರೆ. ‘ನಾನು ಯಾವುದೇ ಡಿಮ್ಯಾಂಡ್ ಇಟ್ಟಿಲ್ಲ. ನಾನಿಟ್ಟಿರೋದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೆ ಕ್ಷೇತ್ರದಲ್ಲಿ ಬಾಕಿಯಿರುವ ನೀರಾವರಿ ಯೋಜನೆ ಪೂರ್ಣಗೊಳಿಸಬೇಕು, ನನ್ನ ಶಕ್ತಿ ಮೀರಿ ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸ ಮಾಡುತ್ತೇನೆ. ಎಲ್ಲಾ ಜಿಲ್ಲೆಗಳಲ್ಲೂ ನನ್ನನ್ನು ಪ್ರಚಾರಕ್ಕೆ ಬಳಸಿಕೊಳ್ಳುತ್ತೇವೆ ಎಂದಿದ್ದಾರೆ. ನಾನು ಅಥಣಿಯಿಂದ ಟಿಕೆಟ್ ಕೇಳಿದ್ದು, ಅದಕ್ಕೆ ಒಪ್ಪಿಗೆ ನೀಡಲಾಗಿದೆ. ನನ್ನ ಹೆಣ ಕೂಡ ಬಿಜೆಪಿ ಕಚೇರಿ ಮುಂದೆ ಹೋಗಲ್ಲʼ ಅಂತ ಸವದಿ ಹೇಳಿದ್ದಾರೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರೊ ಸಿಎಂ ಬೊಮ್ಮಾಯಿ, ಸವದಿ ಕಾಂಗ್ರೆಸ್‌ಗೆ ಹೋಗ್ತಿರೋದು ದುಃಖ ತರಿಸಿದೆ ಅಂತ ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನೊಂದ ಕಡೆ ಬಿಜೆಪಿ ಟಿಕೆಟ್‌ ವಂಚಿತರಾದ ವಿಧಾನ ಪರಿಷತ್‌ನ ಮಾಜಿ ಶಾಸಕ ರಘು ಆಚಾರ್‌, ಜೇವರ್ಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಹಾಗೂ ಮೂಡಿಗೇರಿಯ ಎಂ ಪಿ ಕುಮಾರಸ್ವಾಮಿ ಜೆಡಿಎಸ್‌ ಪಕ್ಷ ಸೇರಿದ್ದಾರೆ.

-masthmagaa.com

Contact Us for Advertisement

Leave a Reply