masthmagaa.com:
ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ಮೊದಲಿಂದಲೂ ವಿರೋಧಿಸುತ್ತ ಬಂದಿರೋ ಬಿಜೆಪಿ ಸಂಸದ ವರುಣ್ ಗಾಂಧಿ ಪ್ರಧಾನಿ ಮೋದಿಗೆ ಒಂದು ಪತ್ರವನ್ನು ಆನ್ಲೈನ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಅದ್ರಲ್ಲಿ 4 ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. 1. ಕೃಷಿ ಸುಧಾರಣೆಗಳನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ 700 ರೈತರು ಪ್ರಾಣ ಕಳ್ಕೊಂಡಿದ್ದಾರೆ. ಅವರ ಕುಟುಂಬಗಳಿಗೆ ತಲಾ ಒಂದೊಂದು ಕೋಟಿ ರೂಪಾಯಿ ಪರಿಹಾರ ನೀಡಬೇಕು. 2.ರೈತರ ವಿರುದ್ಧ ರಾಜಕೀಯವಾಗಿ ಹೇರಲಾದ ಎಲ್ಲಾ ಕೇಸ್ಗಳನ್ನು ವಾಪಸ್ ಪಡೆದುಕೊಳ್ಳಬೇಕು. 3. ಎಂಎಸ್ಪಿಯನ್ನು ವಿಸ್ತರಿಸಬೇಕು. ಅಲ್ಲಿಯವರೆಗೆ ಪ್ರತಿಭಟನೆ ಅಂತ್ಯವಾಗೋದಿಲ್ಲ. 4. ಲಖೀಂಪುರ್ಖೇರಿ ಹಿಂಸಾಚಾರ ಪ್ರಕರಣ ನ್ಯಾಯಯುತವಾಗಿ ತನಿಖೆಯಾಗಬೇಕು. ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾ ಸೇರಿದಂತೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಅಂತ ಬೇಡಿಕೆ ಇಟ್ಟಿದ್ದಾರೆ.
-masthmagaa.com
Contact Us for Advertisement