ನೈತಿಕತೆ ಆಧಾರದ ಮೇಲೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ರಾಜೀನಾಮೆ ನೀಡಲಿ: ಉದ್ಧವ್‌ ಠಾಕ್ರೆ

masthmagaa.com:

ಮಹಾರಾಷ್ಟ್ರದ ಉದ್ಧವ್‌ ಠಾಕ್ರೆ ಬಣದ ಕೇಸ್‌ಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ತೀರ್ಪು ಹೊರಬಿದ್ದ ಬೆನ್ನಲ್ಲೇ ಹೊಸದಾಗಿ ಚುನಾವಣೆ ಎದುರಿಸೋಣ ಅಂತ ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್‌ ಠಾಕ್ರೆ ಹೇಳಿದ್ದಾರೆ. ಚುನಾವಣೆ ಎದುರಿಸೋಣ, ಜನರೇ ನಿರ್ಧಾರ ಕೈಗೊಳ್ಳಲಿ. ಈ ಹಿಂದೆ ನಾನು ನೈತಿಕತೆ ಆಧಾರದ ಮೇಲೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ. ಅದ್ರಂತೆ ಏಕನಾಥ್ ಶಿಂಧೆ ಕೂಡ ನೈತಿಕತೆ ಆಧಾರದ ಮೇಲೆ ರಾಜೀನಾಮೆ ನೀಡಬೇಕು ಅಂತ ಠಾಕ್ರೆ ಆಗ್ರಹಿಸಿದ್ದಾರೆ. ಜೊತೆಗೆ ಕಳೆದ ವರ್ಷ ಬಂಡಾಯ ಎದ್ದು, ನಮ್ಮ ಸರ್ಕಾರ ಉರುಳಲು ಕಾರಣರಾಗಿದ್ದ ಶಿವಸೇನೆ ಶಾಸಕರ ಅನರ್ಹತೆ ಕುರಿತು ಸ್ಪೀಕರ್ ನಿರ್ಧಾರ ಕೈಗೊಳ್ಬೇಕು. ಇಲ್ಲ ಅಂದ್ರೆ ಮತ್ತೆ ಸುಪ್ರೀಂಕೋರ್ಟ್ ಮೊರೆ ಹೋಗಬೇಕಾಗುತ್ತದೆ ಅಂತ ಎಚ್ಚರಿಸಿದ್ದಾರೆ. ಜೊತೆಗೆ ದೇಶದಲ್ಲಿ ʻನಂಗಾ ನಾಚ್ʼ ನಡೆಯುತ್ತಿದ್ದು, ಇದನ್ನ ಪ್ರಧಾನಿ ನರೇಂದ್ರ ಮೋದಿಯವರು ನಿಲ್ಲಿಸಬೇಕು ಅಂತ ಆಗ್ರಹಿಸಿದ್ದಾರೆ. ಇತ್ತ ಏಕನಾಥ್ ಶಿಂಧೆ ಕನಸ್ಸಿನಲ್ಲಿಯೂ ರಾಜೀನಾಮೆ ನೀಡಲ್ಲ ಅಂತ ಎನ್​ಸಿಪಿ ನಾಯಕ ಅಜಿತ್ ಪವಾರ್ ಹೇಳಿದ್ದಾರೆ. ನೈತಿಕತೆ ಆಧಾರದ ಮೇಲೆ ಏಕನಾಥ್ ಶಿಂಧೆ ರಾಜೀನಾಮೆ ನೀಡಬೇಕೆಂದು ಉದ್ಧವ್ ಠಾಕ್ರೆ ಆಗ್ರಹಿಸಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ್ದು, ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಹಾಗೂ ಈಗಿನ ರಾಜಕೀಯ ನಾಯಕರುಗಳ ನಡುವೆ ಅಗಾಧ ವ್ಯತ್ಯಾಸವಿದೆ. ಕನಸ್ಸಿನಲ್ಲಿಯೂ ಏಕನಾಥ್ ಶಿಂಥೆ ರಾಜೀನಾಮೆ ನೀಡಲ್ಲ ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply