ರಾಜ್ಯದಲ್ಲಿ ಲಾಕ್​ಡೌನ್​ ಮತ್ತಷ್ಟು ಕಟ್ಟುನಿಟ್ಟು: ಸಿಎಂ ಯಡಿಯೂರಪ್ಪ

masthmagaa.com:

ಪ್ರಧಾನಿ ನರೇಂದ್ರ ಮೋದಿ ಮೇ 3ರವರೆಗೆ ದೇಶವ್ಯಾಪಿ ಲಾಕ್​ಡೌನ್ ವಿಸ್ತರಿಸಿರುವ ಬೆನ್ನಲ್ಲೇ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಯಡಿಯೂರಪ್ಪ, ಲಾಕ್​ಡೌನ್​ ವಿಸ್ತರಣೆ ನಿರ್ಧಾರ ಸ್ವಾಗತಾರ್ಹ. ಪ್ರಧಾನಿ ಹೇಳಿದಂತೆ ಏಪ್ರಿಲ್ 20ರವರೆಗೆ ರಾಜ್ಯದಲ್ಲಿ ಲಾಕ್​ಡೌನ್​ ನಿಯಮಗಳನ್ನ ಕಟ್ಟುನಿಟ್ಟಾಗಿ ಪಾಲಿಸುತ್ತೇವೆ ಎಂದಿದ್ದಾರೆ.

ನಾಳೆ ಕೇಂದ್ರ ಸರ್ಕಾರದ ಮಾರ್ಗಸೂಚಿಗಳು ಬರಲಿದ್ದು ಅದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು. ರಾಜ್ಯದಲ್ಲಿ ಲಾಕ್​ಡೌನ್ ನಿಯಮ ಉಲ್ಲಂಘಿಸಿ ಸಂಚಾರ ಮಾಡಿದ 57,633 ವಾಹನಗಳನ್ನ ಜಪ್ತಿ ಮಾಡಿದ್ದು, 2181 ಜನರ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ. ಇದುವರೆಗೆ 95 ಲಕ್ಷ ರೂಪಾಯಿ ದಂಡವನ್ನಿ ವಸೂಲಿ ಮಾಡಿದ್ದೇವೆ ಎಂದರು. ಇದೇ ವೇಳೆ ಪ್ರಧಾನಿ ಮೋದಿ ನೀಡಿದ 7 ಸಲಹೆಗಳನ್ನು ಕಟ್ಟುನಿಟ್ಟಾಗಿ ಕಾಪಾಡುತ್ತೇವೆ ಅಂತ ಸಿಎಂ ಯಡಿಯೂರಪ್ಪ ಹೇಳಿದ್ರು.

-masthmagaa.com

Contact Us for Advertisement

Leave a Reply