masthmagaa.com:
ಪ್ರಧಾನಿ ನರೇಂದ್ರ ಮೋದಿ ಮೇ 3ರವರೆಗೆ ದೇಶವ್ಯಾಪಿ ಲಾಕ್ಡೌನ್ ವಿಸ್ತರಿಸಿರುವ ಬೆನ್ನಲ್ಲೇ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಯಡಿಯೂರಪ್ಪ, ಲಾಕ್ಡೌನ್ ವಿಸ್ತರಣೆ ನಿರ್ಧಾರ ಸ್ವಾಗತಾರ್ಹ. ಪ್ರಧಾನಿ ಹೇಳಿದಂತೆ ಏಪ್ರಿಲ್ 20ರವರೆಗೆ ರಾಜ್ಯದಲ್ಲಿ ಲಾಕ್ಡೌನ್ ನಿಯಮಗಳನ್ನ ಕಟ್ಟುನಿಟ್ಟಾಗಿ ಪಾಲಿಸುತ್ತೇವೆ ಎಂದಿದ್ದಾರೆ.
ನಾಳೆ ಕೇಂದ್ರ ಸರ್ಕಾರದ ಮಾರ್ಗಸೂಚಿಗಳು ಬರಲಿದ್ದು ಅದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು. ರಾಜ್ಯದಲ್ಲಿ ಲಾಕ್ಡೌನ್ ನಿಯಮ ಉಲ್ಲಂಘಿಸಿ ಸಂಚಾರ ಮಾಡಿದ 57,633 ವಾಹನಗಳನ್ನ ಜಪ್ತಿ ಮಾಡಿದ್ದು, 2181 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಇದುವರೆಗೆ 95 ಲಕ್ಷ ರೂಪಾಯಿ ದಂಡವನ್ನಿ ವಸೂಲಿ ಮಾಡಿದ್ದೇವೆ ಎಂದರು. ಇದೇ ವೇಳೆ ಪ್ರಧಾನಿ ಮೋದಿ ನೀಡಿದ 7 ಸಲಹೆಗಳನ್ನು ಕಟ್ಟುನಿಟ್ಟಾಗಿ ಕಾಪಾಡುತ್ತೇವೆ ಅಂತ ಸಿಎಂ ಯಡಿಯೂರಪ್ಪ ಹೇಳಿದ್ರು.
-masthmagaa.com
Contact Us for Advertisement