ಕಾವೇರಿದ ಪಂಚರಾಜ್ಯ ಚುನಾವಣೆ! ಎಲ್ಲೆಲ್ಲೂ ಫ್ರೀಬೀಸ್‌ ಹಾವಳಿ!

masthmagaa.com:

ಪಂಚರಾಜ್ಯಗಳಲ್ಲಿ ಚುನಾವಣಾ ರಣ ಕಹಳೆ ಜೋರಾದ ಹಿನ್ನಲೆ ಆಡಳಿತ ಹಾಗೂ ಪ್ರತಿ ಪಕ್ಷಗಳು ಮತದಾರರಿಗೆ ಭಾರಿ ಆಫರ್‌ಗಳನ್ನ ನೀಡ್ತಾಯಿವೆ. ಇಂದು ಮಧ್ಯ ಪ್ರದೇಶದಲ್ಲಿ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಡ ಕುಟುಂಬಗಳ ಹೆಣ್ಣು ಮಕ್ಕಳಿಗೆ ಸ್ನಾತಕೋತ್ತರ ಪದವಿಯವರೆಗೆ ಉಚಿತ ಶಿಕ್ಷಣ ನೀಡುವುದಾಗಿ ಹೇಳಿದ್ದಾರೆ. ಜೊತೆಗೆ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಕೇವಲ 450 ರೂಪಾಯಿಗೆ ಗ್ಯಾಸ್‌ ಸಿಲಿಂಡರ್‌ ನೀಡುವುದಾಗಿ ಭರವಸೆ ನೀಡಿದ್ದಾರೆ. ಮಧ್ಯ ಪ್ರದೇಶದ ರೈತರಿಗೆ ಗೋಧಿ ಹಾಗೂ ಭತ್ತಕ್ಕೆ ಬೆಂಬಲ ಬೆಲೆ ಘೋಷಿಸುವುದಾಗಿ ಭರವಸೆ ನೀಡಿದ್ದಾರೆ. ಪ್ರತಿ ಕುಟುಂಬದ ಒಬ್ಬರಿಗೆ ಉದ್ಯೋಗ ನೀಡ್ತಿವಿ. ಅಥ್ವಾ ಸ್ವಉದ್ಯೋಗಕ್ಕೆ ಅವಕಾಶ ನೀಡಲಾಗುತ್ತೆ ಅಂತ ಹೇಳಿದ್ದಾರೆ. ಇದೇ ವೇಳೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದ್ರೆ ರಾಜ್ಯದ ಐಐಟಿ ಹಾಗೂ ಮೆಡಿಕಲ್‌ ಕಾಲೇಜುಗಳ ಉನ್ನತೀಕರಣ, 6 ಎಕ್ಸಪ್ರೆಸ್‌ ಹೆದ್ದಾರಿಗಳ ನಿರ್ಮಾಣ ಹಾಗೂ ಸುಮಾರು 3ಲಕ್ಷ ಕೋಟಿ ಹಣದಲ್ಲಿ ಬುಡಕಟ್ಟು ಜನಾಂಗದ ಸಬಲೀಕರಣಕ್ಕಾಗಿ ಶ್ರಮಿಸುವುದಾಗಿ ಹೇಳಿದ್ದಾರೆ. ಇದೇ ವೇಳೆ ಸಿ.ಎಂ ಶಿವರಾಜ್‌ ಸಿಂಗ್‌ ಚೌವ್ಹಾಣ್ , ಬಿಜೆಪಿ ಮುಖಂಡ ವಿ.ಡಿ.ಶರ್ಮಾ ಸೇರಿದಂತೆ ಇತರ ನಾಯಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

-m

Contact Us for Advertisement

Leave a Reply