masthmagaa.com:
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವ್ರ ಬಿಡದಿ ಫಾರ್ಮ್ಹೌಸ್ನಲ್ಲಿ ರಾಜಕೀಯ ನಾಯಕರಿಗೆ ಬಾಡೂಟ ಹಾಕಿದ್ದಾರೆ ಅಂತ ಆರೋಪ ಕೇಳಿ ಬಂದಿತ್ತು. ಇದ್ರ ಬೆನ್ನಲ್ಲೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಚುನಾವಣಾ ಅಧಿಕಾರಿಗಳು ಕುಮಾರಸ್ವಾಮಿ ಅಥ್ವಾ ಅವ್ರ ಕುಟುಂಬಸ್ಥರು ಸ್ಥಳದಲ್ಲಿ ಇರ್ಲಿಲ್ಲ. ಹಾಗೇ ಅಲ್ಲಿ ಯಾವ ರಾಜಕೀಯ ಪಕ್ಷದ ಮುಖಂಡರು ಸೇರಿದಂತೆ ಅಂತಹ ಯಾವುದೇ ಚಟುವಟಿಕೆ ಕಂಡು ಬಂದಿಲ್ಲ. ಆದ್ರೆ ಚುನಾವಣಾ ನೀತಿ ಸಂಹಿತೆ ಇರೊದ್ರಿಂದ ಈ ರೀತಿ ಊಟದ ವ್ಯವಸ್ಥೆಗೆ ಅವಕಾಶ ಇಲ್ಲ ಅಂತ ಸ್ಥಳೀಯರಿಗೆ ಎಚ್ಚರಿಕೆ ನೀಡಲಾಗಿದೆ ಅಂತ ಅಧಿಕಾರಿಗಳು ತಿಳಿಸಿದ್ದಾರೆ.
-masthmagaa.com
Contact Us for Advertisement