ದೆಹಲಿ: ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಗೋವಾಗೆ ಮುಖಭಂಗವಾಗಿದೆ. ಯೋಜನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಲೇವಾರಿ ಮಾಡಿದೆ. ಜೊತೆಗೆ 2014ರ ಮಧ್ಯಂತರ ತೀರ್ಪನ್ನು ಪಾಲಿಸುವಂತೆ ಆದೇಶ ನೀಡಿದೆ. 2014ರಲ್ಲಿ ಈ ಬಗ್ಗೆ ತೀರ್ಪು ನೀಡಿದ್ದ ನ್ಯಾಯಾಧೀಕರಣ, ಕರ್ನಾಟಕ ಸರ್ಕಾರ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಒಪ್ಪಿಗೆ ಪಡೆದು ಕಾಮಗಾರಿ ಆರಂಭಿಸಬಹುದು ಅಂತ ತೀರ್ಪು ನೀಡಿತ್ತು.
ಆದ್ರೆ ಮಹದಾಯಿ ಯೋಜನೆ ವಿರೋಧಿಸಿ ಗೋವಾ ಸರ್ಕಾರ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಇದೀಗ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ನ ದ್ವಿಸದಸ್ಯ ಪೀಠ, 2014ರಲ್ಲಿ ನ್ಯಾಯಾಧೀಕರಣ ನೀಡಿದ್ದ ತೀರ್ಪು ಪಾಲಿಸಬೇಕು. ವನ್ಯಜೀವಿ ಸಂರಕ್ಷಣ ಮಂಡಳಿ ಪರಿಸರ ಮತ್ತು ಅರಣ್ಯ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿಯ ಅನುಮತಿ ಪಡೆದು ಕಾಮಕಾರಿ ಆರಂಭಿಸಿ ಅಂತ ಕರ್ನಾಟಕ ಸರ್ಕಾರಕ್ಕೆ ಸೂಚಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಎಜಿ ಪ್ರಭುಲಿಂಗ ನಾವಡ್ಗಿ, ಗೋವಾ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಯೋಗ್ಯವಲ್ಲ ಅಂತ ಸುಪ್ರೀಂಕೋರ್ಟ್ ಹೇಳಿದೆ. ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಅನುಮತಿ ಪಡೆದು ಕಾಮಗಾರಿ ಆರಂಭಿಸಬಹುದು. ಇದಕ್ಕಾಗಿ ಹೊಸದಾಗಿ ಡಿಪಿಆರ್ ಸಲ್ಲಿಸಿ, ನಂತರ ಕಾಮಗಾರಿ ಮುಂದುವರಿಸಬಹುದು ಅಂತ ತಿಳಿಸಿದ್ದಾರೆ.
Contact Us for Advertisement