masthmagaa.com:
ಮಹಾರಾಷ್ಟ್ರ: ಸಿಎಂ ಉದ್ಧವ್ ಠಾಕ್ರೆ ಕುರ್ಚಿಗೆ ಎದುರಾಗಿದ್ದ ಕಂಟಕ ಈಗ ದೂರವಾಗಿದೆ. ಕೇಂದ್ರ ಚುನಾವಣಾ ಆಯೋಗ ವಿಧಾನಪರಿಷತ್ ಚುನಾವಣೆಗೆ ನಡೆಸಲು ಗ್ರೀನ್ ಸಿಗ್ನಲ್ ಕೊಟ್ಟಿದೆ. ಸದ್ಯದಲ್ಲೇ ಅಧಿಸೂಚನೆ ಜಾರಿಯಾಗಲಿದ್ದು, ಮುಂದಿನ 21 ದಿನಗಳ ಒಳಗಾಗಿ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಮೇ 27ರ ಒಳಗಾಗಿ ಚುನಾವಣೆಯ ಎಲ್ಲಾ ಪ್ರಕ್ರಿಯೆಗಳು ಮುಗಿಯೋ ಸಾಧ್ಯತೆ ಇದೆ.
ಈ ಹಿಂದೆ ಉದ್ಧವ್ ಠಾಕ್ರೆ ಚುನಾವಣೆಯಲ್ಲಿ ಸ್ಪರ್ಧಿಸದೇ ಸಿಎಂ ಆಗಿ ಆಯ್ಕೆಯಾಗಿದ್ದರು. ಹೀಗಾಗಿ ಅವರು 6 ತಿಂಗಳ ಒಳಗಾಗಿ ವಿಧಾನಸಭೆ ಅಥವಾ ವಿಧಾನಪರಿಷತ್ಗೆ ಆಯ್ಕೆಯಾಗಬೇಕಿತ್ತು. ಆದ್ರೆ ಕೊರೋನಾ ಹಾವಳಿಯಿಂದಾಗಿ ಚುನಾವಣಾ ಆಯೋಗ ಚುನಾವಣೆಗೆ ಮುಂದಾಗಿರಲಿಲ್ಲ.. ಈ ಬಗ್ಗೆ ರಾಜ್ಯಪಾಲರಿಗೆ ಮನವಿ ಮಾಡಿದ್ರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಇದ್ರ ಬೆನ್ನಲ್ಲೆ ಸಿಎಂ ಉದ್ಧವ್ ಠಾಕ್ರೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಕರೆ ಮಾಡಿ ಮಾತನಾಡಿದ್ದರು.
ಇದ್ರ ಬೆನ್ನಲ್ಲೇ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿಯವರು ವಿಧಾನಪರಿಷತ್ಗೆ ಚುನಾವಣೆ ನಡೆಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಅದರಂತೆ ತಿಂಗಳೊಳಗಾಗಿ ವಿಧಾನಪರಿಷತ್ನ ಖಾಲಿ ಇರುವ 9 ಸ್ಥಾನಗಳಿಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ.
-masthmagaa.com
Contact Us for Advertisement