masthmagaa.com:
ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದ ಆರೋಪಿ ಆದಿತ್ಯ ಆಳ್ವನನ್ನು ಹುಡುಕಿಕೊಂಡು ಬೆಂಗಳೂರಿನ ಸಿಸಿಬಿ ಪೊಲೀಸರು ನಿನ್ನೆ ಮುಂಬೈಗೆ ಹೋಗಿದ್ದರು. ಮುಂಬೈನಲ್ಲಿರುವ ಬಾಲಿವುಡ್ ನಟ ವಿವೇಕ್ ಒಬೆರಾಯ್ ಮನೆ ಮೇಲೆ ದಾಳಿ ನಡೆಸಿ ಶೋಧಕಾರ್ಯ ನಡೆಸಿದ್ದರು. ಅಂದ್ಹಾಗೆ ವಿವೇಕ್ ಒಬೆರಾಯ್ ಅವರ ಪತ್ನಿ ಪ್ರಿಯಾಂಕಾ ಆಳ್ವ ಒಬೆರಾಯ್ ಅವರು ಆದಿತ್ಯ ಆಳ್ವ ಅವರ ಸಹೋದರಿ. ಈ ಸಂಬಂಧ ಸಿಸಿಬಿ ಪೊಲೀಸರು ಪ್ರಿಯಾಂಕಾ ಆಳ್ವಗೂ ನೋಟಿಸ್ ನೀಡಿದ್ದಾರೆ. ಇದೀಗ ಸಿಸಿಬಿ ಪೊಲೀಸರ ಕಾರ್ಯಾಚರಣೆ ಬಗ್ಗೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಮಾತನಾಡಿದ್ದಾರೆ.
ಏನ್ ಹೇಳಿದ್ದಾರೆ ಅಂದ್ರೆ, ‘ಡ್ರಗ್ ಪ್ರಕರಣದಲ್ಲಿ ವಿವೇಕ್ ಒಬೆರಾಯ್ ಮತ್ತು ಸಂದೀಪ್ ಸಿಂಗ್ನನ್ನು ವಿಚಾರಣೆ ನಡೆಸಲು ಬೆಂಗಳೂರು ಪೊಲೀಸರು ಮುಂಬೈಗೆ ಬಂದಿದ್ದರು. ಆದ್ರೆ ಎನ್ಸಿಬಿ ಈ ಬಗ್ಗೆ ತನಿಖೆ ನಡೆಸುತ್ತಿಲ್ಲ. ಅವರಿಗೆ ಮೇಲಿನಿಂದ ಒತ್ತಡ ಹೇರಲಾಗುತ್ತಿದೆ. ಡ್ರಗ್ ಕೇಸ್ನಲ್ಲಿ ವಿವೇಕ್ ಒಬೆರಾಯ್ ಲಿಂಕ್ ಬಗ್ಗೆ ಎನ್ಸಿಬಿ ತನಿಖೆ ನಡೆಸಬೇಕು ಅಂತ ನಾವು ಮನವಿ ಮಾಡುತ್ತೇವೆ. ಒಂದ್ವೇಳೆ ಅವರಿಗೆ ಆಗದಿದ್ದರೆ ಮುಂಬೈ ಪೊಲೀಸರೇ ತನಿಖೆ ನಡೆಸುತ್ತಾರೆ’ ಅಂತ ಅನಿಲ್ ದೇಶ್ಮುಖ್ ಹೇಳಿದ್ದಾರೆ.
-masthmagaa.com
Contact Us for Advertisement