masthmagaa.com:
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ಮತ್ತೆ ಸುದ್ದಿಯಾಗಿದೆ. ಸಾವಿನ ಬಗ್ಗೆ ಸಿಬಿಐ ತನಿಖೆ ಆರಂಭಿಸಿ 5 ತಿಂಗಳು ಕಳೆದಿದೆ. ಈ ಅವಧಿಯಲ್ಲಿ ಸಿಬಿಐಗೆ ಏನು ಸಿಕ್ತು ಅನ್ನೋದನ್ನ ಶೀಘ್ರವೇ ಬಹಿರಂಗಗೊಳಿಸಬೇಕು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಅನ್ನೋದನ್ನ ಹೇಳಬೇಕು ಅಂತ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಆಗ್ರಹಿಸಿದ್ಧಾರೆ. ಅಂದ್ಹಾಗೆ ಜೂನ್ 14ರಂದು ಮುಂಬೈನ ನಿವಾಸದಲ್ಲಿ ಸುಶಾಂತ್ ಸಿಂಗ್ ರಜಪೂತ್ ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆರಂಭಿಕ ತನಿಖೆ ನಡೆಸಿದ ಮುಂಬೈ ಪೊಲೀಸರು ಇದೊಂದು ಆತ್ಮಹತ್ಯೆ ಅಂತ ಹೇಳಿದ್ರು. ನಂತರ ಆಗಸ್ಟ್ನಲ್ಲಿ ಸುಪ್ರೀಂಕೋರ್ಟ್ ಸಿಬಿಐ ತನಿಖೆಗೆ ಆದೇಶಿಸಿತು. ಕೇವಲ ಸಿಬಿಐ ಮಾತ್ರವಲ್ಲ, ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಬಗ್ಗೆ ಜಾರಿ ನಿರ್ದೇಶನಾಲಯ ಮತ್ತು ಮಾದಕ ವಸ್ತುಗಳ ಬಗ್ಗೆ ಎನ್ಸಿಬಿ ತನಿಖೆ ನಡೆಸುತ್ತಿದೆ. ಹಲವು ಬಾಲಿವುಡ್ ಸೆಲೆಬ್ರಿಟಿಗಳನ್ನ ಎನ್ಸಿಬಿ ವಿಚಾರಣೆ ನಡೆಸಿದ್ದು ಸುಶಾಂತ್ ಗೆಳತಿ ರಿಯಾ ಚಕ್ರಬರ್ತ, ಆಕೆಯ ಸಹೋದರ ಸೇರಿದಂತೆ ಹಲವರನ್ನ ಅರೆಸ್ಟ್ ಮಾಡಿತ್ತು. ಅವರಲ್ಲಿ ಕೆಲವರು ಜಾಮೀನಿನ ಮೇಲೆ ಹೊರಗಿದ್ದಾರೆ.
-masthmagaa.com
Contact Us for Advertisement