masthmagaa.com:

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ​ ಪ್ರಕರಣ ಮತ್ತೆ ಸುದ್ದಿಯಾಗಿದೆ. ಸಾವಿನ ಬಗ್ಗೆ ಸಿಬಿಐ ತನಿಖೆ ಆರಂಭಿಸಿ 5 ತಿಂಗಳು ಕಳೆದಿದೆ. ಈ ಅವಧಿಯಲ್ಲಿ ಸಿಬಿಐಗೆ ಏನು ಸಿಕ್ತು ಅನ್ನೋದನ್ನ ಶೀಘ್ರವೇ ಬಹಿರಂಗಗೊಳಿಸಬೇಕು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಅನ್ನೋದನ್ನ ಹೇಳಬೇಕು ಅಂತ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್​ ಆಗ್ರಹಿಸಿದ್ಧಾರೆ. ಅಂದ್ಹಾಗೆ ಜೂನ್ 14ರಂದು ಮುಂಬೈನ ನಿವಾಸದಲ್ಲಿ ಸುಶಾಂತ್ ಸಿಂಗ್​ ರಜಪೂತ್ ಅವರ ಮೃತದೇಹ​ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆರಂಭಿಕ ತನಿಖೆ ನಡೆಸಿದ ಮುಂಬೈ ಪೊಲೀಸರು ಇದೊಂದು ಆತ್ಮಹತ್ಯೆ ಅಂತ ಹೇಳಿದ್ರು. ನಂತರ ಆಗಸ್ಟ್​ನಲ್ಲಿ ಸುಪ್ರೀಂಕೋರ್ಟ್​ ಸಿಬಿಐ ತನಿಖೆಗೆ ಆದೇಶಿಸಿತು. ಕೇವಲ ಸಿಬಿಐ ಮಾತ್ರವಲ್ಲ, ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಬಗ್ಗೆ ಜಾರಿ ನಿರ್ದೇಶನಾಲಯ ಮತ್ತು ಮಾದಕ ವಸ್ತುಗಳ ಬಗ್ಗೆ ಎನ್​ಸಿಬಿ ತನಿಖೆ ನಡೆಸುತ್ತಿದೆ. ಹಲವು ಬಾಲಿವುಡ್​ ಸೆಲೆಬ್ರಿಟಿಗಳನ್ನ ಎನ್​ಸಿಬಿ ವಿಚಾರಣೆ ನಡೆಸಿದ್ದು ಸುಶಾಂತ್ ಗೆಳತಿ ರಿಯಾ ಚಕ್ರಬರ್ತ, ಆಕೆಯ ಸಹೋದರ ಸೇರಿದಂತೆ ಹಲವರನ್ನ ಅರೆಸ್ಟ್ ಮಾಡಿತ್ತು. ಅವರಲ್ಲಿ ಕೆಲವರು ಜಾಮೀನಿನ ಮೇಲೆ ಹೊರಗಿದ್ದಾರೆ.

-masthmagaa.com

Contact Us for Advertisement

Leave a Reply