masthmagaa.com:
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮತ್ತೆ ರಾಷ್ಟ್ರ ರಾಜಕಾರಣಕ್ಕೆ ಬರೋ ಘೋಷಣೆ ಮಾಡಿದ್ದಾರೆ. ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ನಾನು ಉತ್ತರ ಪ್ರದೇಶದಿಂದ ಸ್ಪರ್ಧಿಸ್ತೀನಿ. ಎಲ್ಲಾ ಪ್ರಾದೇಶಿಕ ಪಕ್ಷಗಳು ಬಿಜೆಪಿಯನ್ನು ಸೋಲಿಸಲು ಒಟ್ಟಾಗಬೇಕಾದ ಅವಶ್ಯಕತೆ ಇದೆ ಅಂತ ಹೇಳಿದ್ದಾರೆ. ಈ ಮೂಲಕ ತೃತೀಯ ರಂಗ ರಚನೆಯ ಸುಳಿವು ಕೊಟ್ಟಿದ್ದಾರೆ.
ಮತ್ತೊಂದ್ಕಡೆ ತೃಣಮೂಲ ಕಾಂಗ್ರೆಸ್ ಚೇರ್ ಪರ್ಸನ್ ಆಗಿ ಮತ್ತೊಂದು ಅವಧಿಗೆ ಮಮತಾ ಬ್ಯಾನರ್ಜಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 1998ರಲ್ಲಿ ದೀದಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ಗೆ ಗುಡ್ಬೈ ಹೇಳಿ, ಟಿಎಂಸಿ ಪಕ್ಷ ಸ್ಥಾಪಿಸಿದ್ರು. ಅಲ್ಲಿಂದ ಇಲ್ಲಿಯವರೆಗೆ ಅವರೇ ಅದ್ರ ಮುಖ್ಯಸ್ಥೆಯಾಗಿದ್ದಾರೆ.
-masthmagaa.com
Contact Us for Advertisement