masthmagaa.com:
ಕರ್ನಾಟಕದಲ್ಲಿ ಕಳೆದ 1 ವಾರದಿಂದ ಕೊರೊನಾ ಸೋಂಕು ಹೆಚ್ಚಳವಾಗಿದೆ. ಈ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಕೊರೊನಾ ಹಾಗೂ ಇನ್ಫ್ಲುಯೆಂಜ ಬಗ್ಗೆ ನಿಗಾವಹಿಸಲು ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ ನೀಡಿದೆ. ಈ ಸಂಬಂಧ ನಾಳೆ ಅಧಿಕಾರಿಗಳು, ತಜ್ಞರ ಜತೆ ಸಭೆ ನಡೆಸಲಾಗುತ್ತೆ. ರಾಜ್ಯದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಚರ್ಚಿಸಿ ಮಾಹಿತಿ ನೀಡುತ್ತೇವೆ ಅಂತ ಹೇಳಿದ್ದಾರೆ. ಅಂದ್ಹಾಗೆ 100 ದಿನಗಳ ನಂತ್ರ ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ಕೊರೊನಾ ಕೇಸ್ಗಳು ಹೆಚ್ಚಳವಾಗಿವೆ. ನಿನ್ನೆ ರಾಜ್ಯದಲ್ಲಿ 95 ಪ್ರಕರಣಗಳು ಕಂಡು ಬಂದಿದ್ರೆ ಈ ಪೈಕಿ ಬೆಂಗಳೂರಿನಲ್ಲೇ 79 ಹೊಸ ಕೇಸ್ಗಳು ದಾಖಲಾಗಿವೆ.
-masthmagaa.com
Contact Us for Advertisement