ಕಾಂಗ್ರೆಸ್‌ನ ಹಾಲಿ ಶಾಸಕ ತನ್ವೀರ್‌ ಸೇಠ್‌ ರಾಜಕೀಯ ನಿವೃತ್ತಿ ಘೋಷಣೆ! ಬೆಂಬಲಿಗರ ಹೈಡ್ರಾಮಾ!

masthmagaa.com:

ವಿಧಾನಸಭೆ ಚುನಾವಣೆ ಸಮೀಪದಲ್ಲೇ ಕಾಂಗ್ರೆಸ್‌ನ ಹಾಲಿ ಶಾಸಕ ತನ್ವೀರ್‌ ಸೇಠ್‌ ರಾಜಕೀಯ ನಿವೃತ್ತಿ ಘೋಷಿಸಿರೋದು ಅವರ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ರಾಜೀನಾಮೆ ಕುರಿತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವ್ರಿಗೆ ಪತ್ರ ಬರೆದಿದ್ದು, ಬರುವ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ ಅಂತ ಸ್ಪಷ್ಟಪಡಿಸಿದ್ದಾರೆ. ವಿಷಯ ಬಹಿರಂಗವಾಗ್ತಿದ್ದಂತೆ ತನ್ವೀರ್‌ ಬೆಂಬಲಿಗರ ದಂಡು ಮೈಸೂರಿನಲ್ಲಿರೊ ತನ್ವೀರ್ ಸೇಠ್ ನಿವಾಸದ ಮುಂದೆ ಜಮಾಯಿಸಿ ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿಯುವಂತೆ ಆಗ್ರಹಿಸಿದ್ದಾರೆ. ಓರ್ವ ಬೆಂಬಲಿಗನಂತೂ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಅಭಿಮಾನಿಗಳಿಂದ ಭಾರೀ ವಿರೋಧ ವ್ಯಕ್ತವಾದ ಬೆನ್ನಲ್ಲೇ ಮಾತಾಡಿದ ತನ್ವೀರ್‌, ಚುನಾವಣಾ ರಾಜಕೀಯ ನಿವೃತ್ತಿಗೆ ನಿರ್ಧರಿಸಿದ್ದು ನಿಜ. ಅನಾರೋಗ್ಯ ಕಾರಣದಿಂದ ಮಾತ್ರ ಈ ನಿರ್ಧಾರ ಮಾಡಿದ್ದೇನೆ. ಆದರೆ, ಪಕ್ಷದ ವರಿಷ್ಠ ನಾಯಕರ ನಿರ್ಧಾರಕ್ಕೆ ನಾನು ಬದ್ಧ. ಪಕ್ಷದ ನಾಯಕರು ಚುನಾವಣೆಗೆ ನಿಲ್ಲಲೇಬೇಕು ಅಂದ್ರೆ ಅದಕ್ಕೆ ಸಿದ್ಧ ಅಂತ ಉಲ್ಟಾ ಹೊಡೆದಿದ್ದಾರೆ.

-masthmagaa.com

Contact Us for Advertisement

Leave a Reply