ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಭಾವ‌ ನಾಪತ್ತೆ!

masthmagaa.com:

ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರ ಭಾವ ಮಹದೇವಯ್ಯ ಎಂಬುವವರು ನಾಪತ್ತೆಯಾಗಿದ್ದು, ಪೋಲಿಸರು ಹುಡುಕಾಟ ನಡೆಸಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದ ತೋಟದ ಮನೆಯಲ್ಲಿ ಮಹದೇವಯ್ಯ ತಂಗಿದ್ರು ಎನ್ನಲಾಗಿದೆ, ಸದ್ಯ ಪತ್ನಿ ಬೆಂಗಳೂರಿಗೆ ಹೋಗಿದ್ದು ಮನೆಯಲ್ಲಿ ಒಬ್ಬರೇ ಇದ್ದರು ಅಂತ ಗೊತ್ತಾಗಿದೆ. ಈ ಹಿನ್ನಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಚನ್ನಪಟ್ಟಣ ಗ್ರಾಮಾಂತರ ಪೋಲಿಸ್‌ ಠಾಣೆಯ ಪೋಲಿಸರು ಘಟನೆ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಆ ತೋಟದ ಮನೆಯಲ್ಲಿ ಚಿಲ್ಲಾಪಿಲ್ಲಿಯಾಗಿ ಬಿದ್ದಿರುವ ವಸ್ತುಗಳು , ಲಾಕರ್‌ ಬೀಗ ಓಪನಾಗಿದ್ದು, ಬಟ್ಟೆಗಳು ಚಿಲ್ಲಾಪಿಲ್ಲಿಯಾದ ದೃಶ್ಯ ಕಂಡುಬಂದಿದೆ. ಇದೀಗ ಮಹದೇವಯ್ಯನವರು ಕಿಡ್ಯ್ನಾಪ್‌ ಆಗಿರುವ ಶಂಕೆ ವ್ಯಕ್ತವಾಗಿದೆ. ಅವರ ಮೊಬೈಲ್‌ ಕೂಡ ಸ್ವಿಚ್‌ ಆಫ್‌ ಬರ್ತಿದ್ದು, ಮಹದೇಶ್ವರ ಬೆಟ್ಟದಲ್ಲಿ ಟವರ್‌ ಲೊಕೇಶನ್‌ ತೋರಿಸ್ತಿದೆ ಅಂತ ಪೋಲಿಸರು ಹೇಳಿದ್ದಾರೆ.

-masthmagaa.com

Contact Us for Advertisement

Leave a Reply