masthmagaa.com:
ದೆಹಲಿ: ಕೊರೋನಾ ವೈರಸ್ ಹಿನ್ನೆಲೆ ಭಾರತವನ್ನು ಲಾಕ್ಡೌನ್ ಮಾಡಲಾಗಿದೆ. ಆದ್ರೆ ದೇಶದಲ್ಲಿ ದಿನೇ ದಿನೇ ಕೊರೋನಾ ಪೀಡಿತರು ಮತ್ತು ಈ ಮಹಾಮಾರಿಗೆ ಬಲಿಯಾಗುತ್ತಿರುವವರ ಸಂಖ್ಯೆ ಜಾಸ್ತಿಯಾಗುತ್ತಲೇ ಇದೆ. ಹೀಗಾಗಿ ಏಪ್ರಿಲ್ 14ರ ಬಳಿಕ ಕೇಂದ್ರ ಸರ್ಕಾರ ಲಾಕ್ಡೌನ್ ಮುಂದುವರಿಸುತ್ತಾ..? ಅನ್ನೋ ಪ್ರಶ್ನೆ ಜನರನ್ನು ಕಾಡುತ್ತಿದೆ.
ಈ ಬಗ್ಗೆ ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಸಭೆ ನಡೆಸಿದ್ದರು. ಅಲ್ಲದೆ ಸಭೆಯಲ್ಲಿ ಲಾಕ್ಡೌನ್ ಬಗ್ಗೆ ಚರ್ಚೆ ನಡೆಸಲಾಗಿತ್ತು. ಇದರಲ್ಲಿ ಪ್ರತಿ ಜಿಲ್ಲೆಯ ವರದಿಗಳನ್ನು ಪರಿಶೀಲಿಸಿದ ಬಳಿಕ ಲಾಕ್ಡೌನ್ ತೆರವು ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತೆ ಅಂತ ತಿಳಿಸಲಾಗಿತ್ತು.
ಅಂದ್ರೆ ಏಪ್ರಿಲ್ 14ರ ಬಳಿಕ ಇಡೀ ದೇಶದಾದ್ಯಂತ ಒಂದೇ ಬಾರಿಗೆ ಲಾಕ್ಡೌನ್ ತೆರವುಗೊಳಿಸೋ ಸಾಧ್ಯತೆ ತುಂಬಾ ಕಡಿಮೆ. ಬದಲಾಗಿ ಯಾವ ಭಾಗದಲ್ಲಿ ಕೊರೋನಾ ಸೋಂಕಿನ ಹಾವಳಿ ಹೆಚ್ಚಾಗಿದೆಯೋ..? ಯಾವ ಭಾಗದಲ್ಲಿ ಮುಂದಿನ ದಿನಗಳಲ್ಲಿ ಕೊರೋನಾ ಹರಡಬಹುದು ಎಂಬ ಅಂದಾಜು ಇದೆಯೋ ಅಂತಹ ಪ್ರದೇಶಗಳಲ್ಲಿ ಮಾತ್ರವೇ ಲಾಕ್ಡೌನ್ ಮುಂದುವರಿಸುವ ಸಾಧ್ಯತೆ ಇದೆ. ಜೊತೆಗೆ ರೈಲ್ವೆ ಮತ್ತು ವಿಮಾನಯಾನದ ಬಗ್ಗೆಯೂ ಇನ್ನೂ ಅಂತಿಮ ತೀರ್ಮಾನವಾಗಿಲ್ಲ. ಏಪ್ರಿಲ್ 14ರ ಬಳಿಕವೂ ಇವುಗಳ ಮೇಲೆ ನಿರ್ಬಂಧ ಮುಂದುವರಿಯುವ ಸಾಧ್ಯತೆ ದಟ್ಟವಾಗಿದೆ.
-masthmagaa.com
Contact Us for Advertisement