ಮಂಗಳೂರಿನಲ್ಲಿ ನೈತಿಕ ಪೊಲೀಸ್‌ಗಿರಿ! ಅನ್ಯಕೋಮಿನ ಯುವಕನ ಮೇಲೆ ಹಲ್ಲೆ!

masthmagaa.com:

ಮಂಗಳೂರಿನ ಸೋಮೇಶ್ವರ ಬೀಚ್‌ನಲ್ಲಿ ನಿನ್ನೆ ತಡರಾತ್ರಿ ನೈತಿಕ ಪೊಲೀಸ್‌ಗಿರಿ ಪ್ರಶ್ನಿಸಿ ಅನ್ಯಕೋಮಿನ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಬಳಿಕ ಘಟನೆಗೆ ಸಂಬಂಧಿಸಿದಂತೆ 4 ಯುವಕರನ್ನ ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಪ್ರತಿಕ್ರಿಯಿಸಿರೋ ಗೃಹ ಸಚಿವ ಜಿ ಪರಮೇಶ್ವರ್‌, ಕಾನೂನಿಗೆ ವಿರುದ್ಧವಾದ ಯಾವುದೇ ಚಟುವಟಿಕೆಗಳನ್ನ ನಡೆಸುವವರಿಗೆ ಕಾನೂನಿನ ಚೌಕಟ್ಟಿನಲ್ಲೇ ಶಿಕ್ಷೆ ನೀಡುವ ಅಧಿಕಾರವನ್ನು ಕಾನೂನು ನಮಗೆ ನೀಡಿದೆ. ನೈತಿಕ ಪೊಲೀಸ್ ಗಿರಿಯನ್ನು ಅನುಸರಿಸುವಾಗ ಕಾನೂನಿಗೆ ವಿರುದ್ಧವಾದ ಕೃತ್ಯಗಳು ಅವರಿಂದ ಆಗಿದ್ದರೆ ನಾವು ಖಂಡಿತ ಕ್ರಮ ಕೈಗೊಳ್ಳುತ್ತೇವೆ ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply