masthmagaa.com:
ವಿಶ್ವಕಪ್ ಬಳಿಕ ಕ್ರಿಕಟ್ನಿಂದಲೇ ದೂರ ಉಳಿದುಕೊಂಡಿರೋ ಮಹೇಂದ್ರ ಸಿಂಗ್ ಧೋನಿಯವರು ಈ ಬಾರಿಯ ಟಿ-20 ವಿಶ್ವಕಪ್ನಲ್ಲಿ ಆಡ್ತಾರಾ ಅನ್ನೋ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ. ಈ ನಡುವೆ ಧೋನಿ ಕುರಿತಾಗಿ ಬಿಸಿಸಿಐ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಸಿಸಿಐ ಅಧಿಕಾರಿಯೊಬ್ಬರು, ಸೆಲೆಕ್ಷನ್ ಕಮಿಟಿಗೆ ಹೊಸ ಅಧ್ಯಕ್ಷರು ಮತ್ತು ಇಬ್ಬರು ಸದಸ್ಯರ ಆಗಮನದಿಂದ ಬಿಸಿಸಿಐ ನಿಲುವಿನಲ್ಲಿ ಯಾವುದೇ ಬದಲಾವಣೆ ಆಗೋದಿಲ್ಲ. ಧೋನಿ ಟಿ-20 ವಿಶ್ವಕಪ್ನಲ್ಲಿ ಸ್ಥಾನ ಪಡೆಯಬೇಕಾದ್ರೆ ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡಬೇಕು ಅಂತ ತಿಳಿಸಿದ್ದಾರೆ.
2019ರ ಜುಲೈನಲ್ಲಿ ನ್ಯೂಜಿಲೆಂಡ್ ವಿರುದ್ಧ ವಿಶ್ವಕಪ್ ಸೆಮಿಫೈನಲ್ನಲ್ಲಿ ಸೋತ ಬಳಿಕ ಧೋನಿ ಕ್ರಿಕೆಟ್ನಿಂದ ದೂರ ಉಳಿದಿದ್ದಾರೆ. ಮಾರ್ಚ್ 29ರಿಂದ ಆರಂಭವಾಗಲಿರುವ ಐಪಿಎಲ್ನಲ್ಲಿ ಪುನಃ ಫೀಲ್ಡ್ಗೆ ಇಳಿಯುತ್ತಿದ್ದಾರೆ.
masthmagaa.com:
Contact Us for Advertisement