ಮುಂಬೈನಲ್ಲಿ ಮಹಾಮಳೆ..20 ಮಂದಿ ಬಲಿ!

masthmagaa.com:

ಮಹಾರಾಷ್ಟ್ರದ ಮುಂಬೈನಲ್ಲಿ ಮಳೆಯಬ್ಬರ ಜೋರಾಗಿದೆ. ಚೆಂಬೂರ್ ಮತ್ತು ವಿಖ್ರೋಲಿಯಲ್ಲಿ ಮನೆಗಳು ಕುಸಿದಿದ್ದು, ಅದ್ರ ಅವಶೇಷಗಳ ಅಡಿಯಲ್ಲಿ ಸಿಲುಕಿ 20 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 24 ಮಂದಿಯನ್ನು ರಕ್ಷಣೆ ಮಾಡಲಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿ ಕೂಡ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಗೊಂಡವರಿಗೆ 50 ಸಾವಿರ ಪರಿಹಾರ ಕೂಡ ಘೋಷಿಸಿದ್ದಾರೆ. ಮುಂಬೈನಲ್ಲಿ ನಿನ್ನೆ ರಾತ್ರಿ 8 ಗಂಟೆಯಿಂದ ಇವತ್ತು ಬೆಳಗ್ಗೆ 8 ಗಂಟೆವರೆಗೆ 176 ಮಿಲಿಮೀಟರ್ ಮಳೆಯಾಗಿದೆ. ಕೆಲವು ಭಾಗಳಲ್ಲಂತೂ 200 ಮಿಲಿಮೀಟರ್​​ಗೂ ಹೆಚ್ಚು ಮಳೆಯಾಗಿದೆ. ರಸ್ತೆಯೆಲ್ಲಾ ನೀರು ತುಂಬಿಕೊಂಡು ಕೆರೆಯಂತಾಗಿದ್ದು, ಜನ ಓಡಾಡೋಕೂ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ರೈಲು ಹಳಿಗಳೆಲ್ಲಾ ನೀರಿನಲ್ಲಿ ಮುಳುಗಿದ್ದು, ರೈಲು ಸಂಚಾರ ಕೂಡಾ ಸ್ಥಗಿತಗೊಂಡಿದೆ. ಮುಂದಿನ ಐದು ದಿನಗಳ ಕಾಲ ಮುಂಬೈನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಅಂತ ಭಾರತೀಯ ಹವಾಮಾನ ಇಲಾಖೆ ಕೂಡ ಎಚ್ಚರಿಸಿದೆ.

-masthmagaa.com

Contact Us for Advertisement

Leave a Reply