masthmagaa.com:
ಈ ವರ್ಷ ಮೈಸೂರು ದಸರಾ ಉತ್ಸವದ ಉದ್ಘಾಟನೆಗೆ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರನ್ನು ಆಯ್ಕೆ ಮಾಡಿ ಸಿಎಂ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದಾರೆ. ನಾಡಿನ 413ನೇ ಮೈಸೂರು ದಸರಾ ಮಹೋತ್ಸವವನ್ನು ಖ್ಯಾತ ಸಾಹಿತಿ ಸಂಗೀತ ನಿರ್ದೇಶಕ, ನಾದಬ್ರಹ್ಮ ಹಂಸಲೇಖ ಅವರು ಉದ್ಘಾಟಿಸಲಿದ್ದಾರೆ. ಮೈಸೂರು ದಸರಾವನ್ನ ಈ ಬಾರಿ ಅದ್ಧೂರಿಯಾಗಿ ಮಾಡಲಾಗುತ್ತದೆ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ಇತ್ತ ದಸರಾ ಉದ್ಘಾಟನೆಗೆ ತಮ್ಮನ್ನ ಆಯ್ಕೆ ಮಾಡಿರೋದಕ್ಕೆ ಹಂಸಲೇಖ ಸಂತೋಷ ವ್ಯಕ್ತಪಡಿಸಿದ್ದು, ಎಲ್ಲಾ ಕಲಾವಿದರ ಪರವಾಗಿ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ.
-masthmagaa.com
Contact Us for Advertisement