ʻಮುಖ್ಯಮಂತ್ರಿಗೆ ಎದೆಗಾರಿಕೆ ಇದೆಯೇನ್ರಿ?ʼ ಸಿದ್ದು ವಿರುದ್ದ ʻದಳʼಪತಿ ಗುಟುರು!

masthmagaa.com:

ʻರಾಜ್ಯ ಕಾಂಗ್ರೆಸ್‌ ಸರ್ಕಾರದ ಲಂಚಾವತಾರದ ನಾಟಕಗಳ ಒಂದೊಂದೇ ಅಂಕ ತೆರೆದುಕೊಳ್ಳುತ್ತಿದೆ, ಸೀಸನ್‌ 1, ಸೀಸನ್‌ 2 ಅನ್ನುವ ರೀತಿಯಲ್ಲಿ ಎಲ್ಲವೂ ಬಯಲಾಗುತ್ತಿದೆ’ ಅಂತ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ʻಕಾಂಗ್ರೆಸ್ ಕಚೇರಿಯಲ್ಲಿ ಸಭೆಯೊಂದು ನಡೆದಿದೆ. ಆ ಸಭೆಯಲ್ಲಿ ಸಿಎಂ, ಡಿಸಿಎಂ ಇಬ್ಬರೂ ವೀರಾವೇಶದಲ್ಲಿ ಮಾತಾಡಿದ್ದಾರೆ. ಮುಖ್ಯಮಂತ್ರಿ ಪೆನ್‌ಡ್ರೈವ್‌ʼಗೆ ಪ್ರತಿಯಾಗಿ ಪೆನ್‌ ತೆಗೆದು ತೋರಿಸಿ ಅಭಿನಯ ಮಾಡಿದ್ದಾರೆ. ಅವರ ಅಭಿನಯಕ್ಕೆ ಉತ್ತರ ಕೊಡದೇ ಇರಲಾರೆ. ನಾನು ಇಡುವ ಸಾಕ್ಷ್ಯಕ್ಕೆ ಪ್ರತಿಯಾಗಿ ಆರೋಪಿತ ವ್ಯಕ್ತಿಯ ಮೇಲೆ ಕ್ರಮ ಜರುಗಿಸುವ ಎದೆಗಾರಿಕೆ ಮುಖ್ಯಮಂತ್ರಿಗೆ ಇದೆಯಾ? ಇದ್ದರೆ ಹೇಳಲಿ ಅಂತ ಸವಾಲು ಹಾಕಿದ್ದಾರೆ.

-masthmagaa.com

Contact Us for Advertisement

Leave a Reply