ಮೈಸೂರು: ಮೆದುಳು ನಿಷ್ಕ್ರಿಯಗೊಂಡಿದ್ದ ಮಗನ ಅಂಗಾಂಗ ದಾನ ಮಾಡಿದ ಪೋಷಕರು

masthmagaa.com:

ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಮಗನ ಅಂಗಾಂಗಗಳನ್ನ ಪೋಷಕರು ದಾನ ಮಾಡಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಇಂಜಿನಿಯರಿಂಗ್‌ ವಿದ್ಯಾರ್ಥಿ ಮನೋಜ್‌ ಶಂಕರ್‌ಗೆ ಅಪಘಾತದಲ್ಲಿ ತಲೆಗೆ ಪೆಟ್ಟು ಬಿದ್ದು ಕೋಮಾದಲ್ಲಿದ್ದರು. ಮೈಸೂರಿನ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮನೋಜ್‌ ಮೆದುಳು ನಿಷ್ಕ್ರಿಯಗೊಂಡಿದ್ದು, ಎರಡು ದಿನ ಕಳೆದರೂ ಚೇತರಿಸಿಕೊಂಡಿಲ್ಲ. ಹೀಗಾಗಿ ಯುವಕನ ತಂದೆ-ತಾಯಿ ಮಗನ ಹೃದಯ, ಲಿವರ್‌, ಕಿಡ್ನಿ, ಕಾರ್ನಿಯಾ ದಾನ ಮಾಡಿದ್ದಾರೆ.

-masthmagaa.com

Contact Us for Advertisement

Leave a Reply