ಕೊರೋನಾ ಭೀತಿ ನಡುವೆಯೇ ರಾಜ್ಯದಲ್ಲಿ ಹಕ್ಕಿ ಜ್ವರದ ಆತಂಕ..!

masthmagaa.com:

ದೇಶಾದ್ಯಂತ ಕೊರೋನಾ ವೈರಸ್​ ಭೀತಿ ಹೆಚ್ಚಾಗಿರುವ ನಡುವೆಯೇ ಮೈಸೂರಿನಲ್ಲಿ ಹಕ್ಕಿ ಜ್ವರದ ಭೀತಿ ಶುರುವಾಗಿದೆ. ಇದಕ್ಕೆ ಕಾರಣ ಕಳೆದೊಂದು ವಾರದಿಂದ 12ಕ್ಕೂ ಹೆಚ್ಚು ಕೊಕ್ಕರೆಗಳು ಸಾವನ್ನಪ್ಪಿರೋದು. ಕೇರಳದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವುದರಿಂದ ಮೈಸೂರಿಗರಲ್ಲಿಯೂ ಕೊಕ್ಕರೆಗಳ ಸಾವು ಭಾರಿ ಆತಂಕಕ್ಕೆ ಕಾರಣವಾಗಿದೆ.
ಮೈಸೂರು ಪಾಲಿಕೆಯ 55ನೇ ವಾರ್ಡ್​ನಲ್ಲೇ 12 ಕೊಕ್ಕರೆಗಳು ಸಾವನ್ನಪ್ಪಿವೆ. ಸ್ಥಳಕ್ಕೆ ಭೇಟಿ ನೀಡಿದ ಪಶು ವೈದ್ಯಕೀಯ ಇಲಾಖೆಯ ಅಧಿಕಾರಿಗಳು ಕೊಕ್ಕರೆಗಳ ಸ್ಯಾಂಪಲ್​​ಗಳನ್ನು ಬೆಂಗಳೂರಿನ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ಪ್ರಯೋಗಾಲಯಕ್ಕೆ ರವಾನೆ ಮಾಡಿದ್ದಾರೆ.

-masthmagaa.com

Contact Us for Advertisement

Leave a Reply