ಟಿ. ನರಸೀಪುರ ಬಳಿ ಭೀಕರ ರಸ್ತೆ ಅಪಘಾತ 10 ಮಂದಿ ಸಾವು!

masthmagaa.com:

ಮೈಸೂರು ಜಿಲ್ಲೆಯ ಟಿ. ನರಸೀಪುರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮೈಸೂರು ಹಾಗೂ ಕೊಳ್ಳೇಗಾಲ ಮುಖ್ಯ ರಸ್ತೆಯಲ್ಲಿ ಬರುವ ಕುರುಬೂರು ಗ್ರಾಮದ ಬಳಿ ಇನ್ನೋವಾ ಕಾರಿಗೆ ಖಾಸಗಿ ಬಸ್‌ ಡಿಕ್ಕಿಯಾಗಿ ಕನಿಷ್ಠ 10 ಮಂದಿ ಪ್ರಾಣ ಬಿಟ್ಟಿದ್ದಾರೆ. ಅತಿಯಾದ ವೇಗವೇ ದುರಂತಕ್ಕೆ ಕಾರಣ ಅಂತ ಹೇಳಲಾಗ್ತಿದೆ. ಅನೇಕ ಜನರಿಗೆ ಗಂಭೀರ ಗಾಯಗಳಾಗಿವೆ. ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರು ಬಳ್ಳಾರಿ ಮೂಲದವರು, ಪ್ರವಾಸಕ್ಕೆ ಬಂದಿದ್ರು ಅಂತ ಗೊತ್ತಾಗಿದೆ. ಇನ್ನು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 10 ಜನರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ಕೊಡ್ತೀವಿ ಅಂತ ಹೇಳಿದ್ದಾರೆ. ಆ ಕಡೆ ಅಸ್ಸಾಂನ ಗುವಾಹಟಿಯಲ್ಲಿ ವೇಗವಾಗಿ ಬಂದ ಸ್ಕಾರ್ಪಿಯೋ, ಪಿಕಪ್‌ಗೆ ಡಿಕ್ಕಿ ಹೊಡೆದ ಪರಿಣಾಮ 7 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, 6 ಮಂದಿ ಗಾಯಗೊಂಡಿದ್ದಾರೆ.

-masthmagaa.com

Contact Us for Advertisement

Leave a Reply