ಫೆಬ್ರುವರಿ 24, 25 ರಂದು ರಾಷ್ಟ್ರೀಯ ಐಕ್ಯತಾ ಸಮಾವೇಶ- ಸಿಎಂ!

masthmagaa.com:

ಫೆಬ್ರುವರಿ 24, 25 ರಂದು ಬೆಂಗ್ಳೂರಿನಲ್ಲಿ ರಾಷ್ಟ್ರೀಯ ಐಕ್ಯತಾ ಸಮಾವೇಶ ಆಯೋಜಿಸಲಾಗಿದೆ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರೋ ಸಿಎಂ, ಭಾರತದ ಸಂವಿಧಾನ ಜಾರಿಗೆ ಬಂದು 75 ವರ್ಷಕ್ಕೆ ಕಾಲಿಟ್ಟಿದೆ. ಅಮೃತ ಉತ್ಸವದ ಕಾರ್ಯಕ್ರಮವನ್ನ ಅರ್ಥಪೂರ್ಣವಾಗಿ ಆಚರಿಸಬೇಕು ಅಂತ ತೀರ್ಮಾನ ಮಾಡಿದ್ದೇವೆ. 31 ಜಿಲ್ಲೆಗಳಲ್ಲಿ ಸಂವಿಧಾನ ಜಾಥಾ ಮಾಡುವ ಕಾರ್ಯಕ್ರಮವನ್ನು ಜನವರಿ 26 ರಿಂದ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಇದಕ್ಕೂ ಮುಂಚೆ ಬೆಂಗ್ಳೂರಿನಲ್ಲಿ ಈ ಸಮಾವೇಶ ನಡೆಯಲಿದೆ ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply